ಶಕ್ತಿ ಯೋಜನೆಗಾಗಿ 6,100 ಹೊಸ ಬಸ್‌ ಸೇರ್ಪಡೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಮುಂದಿನ 12 ತಿಂಗಳುಗಳಲ್ಲಿ ಸುಮಾರು 6,100 ಹೊಸ ಬಸ್‌ಗಳನ್ನು ಸೇವೆಗೆ ಸೇರಿಸಲು ಗುರುವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಿದೆ, ಹೀಗಾಗಿ ಮುಂದಿನ 12 ತಿಂಗಳುಗಳಲ್ಲಿ ಸುಮಾರು 6,100 ಹೊಸ ಬಸ್‌ಗಳನ್ನು ಸೇವೆಗೆ ಸೇರಿಸಲು ಗುರುವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

260 ಬಸ್‌ಗಳನ್ನು ಖರೀದಿಸಲು ಮಂಜೂರಾತಿ ನೀಡಲಾಗಿದ್ದು, ಅದರಲ್ಲಿ 100 ಪಲ್ಲಕ್ಕಿ ನಾನ್‌ಎಸಿ ಬಸ್‌ಗಳು, 120 ನಾನ್‌ಎಸಿ ಬಸ್‌ಗಳು ಮತ್ತು ಉತ್ತರ ಕರ್ನಾಟಕಕ್ಕಾಗಿ 40 ಎಸಿ ಬಸ್‌ಗಳಿಗೆ ಅನುಮೋದನೆ ನೀಡಲಾಗಿದೆ. 50 ಕೋಟಿ ವೆಚ್ಚದಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಪ್ರೋತ್ಸಾಹಿಸುವ ಯೋಜನೆಗಳ ಜೊತೆಗೆ ರಾಜ್ಯಾದ್ಯಂತ ಕೈಗಾರಿಕಾ ಶ್ರೇಷ್ಠತೆಯ ಕೇಂದ್ರಗಳನ್ನು ಸರ್ಕಾರ ಸ್ಥಾಪಿಸಲಿದೆ.

ಹೊಸ ಅಧ್ಯಕ್ಷ ಶರತ್ ಬಚ್ಚೇಗೌಡ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ 2019 ಮತ್ತು 2023 ರ ನಡುವೆ ಕಿಯೋನಿಕ್ಸ್‌ನಲ್ಲಿ 200-300 ಕೋಟಿ ರೂಪಾಯಿ ಹಗರಣದ ಬಗ್ಗೆ ಚರ್ಚಿಸಲಾಯಿತು. ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಸಂಬಳ ನೀಡಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ಪ್ರಾಮಾಣಿಕವಾಗಿ ಕೆಲಸ ಮಾಡದವರ ಸಂಬಳ ತಡೆಹಿಡಿಯಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಂಪುಟ ಹೇಳಿದೆ.

ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಕಾವೇರಿ ನೀರಾವರಿ ನಿಗಮದ ಮೂಲಕ ಬರಪೀಡಿತ ಪ್ರದೇಶಗಳಲ್ಲಿ ಕೆರೆ ತುಂಬುವ ಕಾರ್ಯಗಳನ್ನು ಮತ್ತು ರಾಜ್ಯಾದ್ಯಂತ ವಿಶೇಷವಾಗಿ ದಕ್ಷಿಣ ಕರ್ನಾಟಕದಲ್ಲಿ ಏತ ನೀರಾವರಿ ಯೋಜನೆಗಳ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ ಎಂದು ತಿಳಿಸಿದೆ.

ಸಾಂದರ್ಭಿಕ ಚಿತ್ರ
ಗ್ಯಾರಂಟಿಗಳ ಅನುಷ್ಠಾನದ ಒತ್ತಡ ನಿಭಾಯಿಸುತ್ತಲೇ ಸಾರಿಗೆ ಇಲಾಖೆಗೆ 'ಶಕ್ತಿ' ತುಂಬಿದ ಸಿದ್ದರಾಮಯ್ಯ

ನಗರಾಭಿವೃದ್ಧಿ ಇಲಾಖೆಯಿಂದ ಪಟ್ಟಿ ಮಾಡಲಾದ ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯಲ್ಲಿನ ಪೌರಕಾರ್ಮಿಕರಿಗೆ ಮಂಜೂರಾತಿ ನೀಡಲಾಯಿತು. ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಗ್ಯ ಮೂಲಸೌಕರ್ಯ ನಿರ್ಮಾಣದ ಪ್ರಮುಖ ಕಾಮಗಾರಿಗಳನ್ನು ಪಟ್ಟಿ ಮಾಡಿ, ಅನುಮೋದನೆ ಪಡೆದಿದೆ.

ಬೆಂಗಳೂರಿನ ಸಿವಿ ರಾಮನ್ ಆಸ್ಪತ್ರೆ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಮತ್ತು ಸುಮಾರು 135 ಕೋಟಿ ರೂಪಾಯಿ ವೆಚ್ಚದಲ್ಲಿ ತೀವ್ರ ನಿಗಾ ಸೌಲಭ್ಯಗಳನ್ನು ಸ್ಥಾಪಿಸುತ್ತಿರುವ ಒಂಬತ್ತು ಆಸ್ಪತ್ರೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com