ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ಸಂಭವಿಸಿದ ಬೆನ್ನಲ್ಲೇ ಬೆಂಗಳೂರು ಹೋಟೆಲ್ ಸಂಘ ಎಚ್ಚೆತ್ತುಕೊಂಡಿದ್ದು, ನಗರದಾದ್ಯಂತ ಹೊಟೆಲ್ ಗಳಲ್ಲಿ ಭದ್ರತಾ ವ್ಯವಸ್ಥೆ ಹೆಚ್ಚಿಸುವುದಕ್ಕೆ ಯೋಜನೆ ರೂಪಿಸಲು ಮುಂದಾಗಿದೆ. ರಾಮೇಶ್ವರಂ ಕೆಫೆಯಲ್ಲಿ ನಡೆದ ದುರಂತ ಸಾರ್ವಜನಿಕ ಸ್ಥಳಗಳನ್ನು ಇನ್ನಷ್ಟು ಸುರಕ್ಷಿತವಾಗಿರಿಸುವುದು ಹೇಗೆ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.
ಶುಕ್ರವಾರ ಮಧ್ಯಾಹ್ನ ರಾಮೇಶ್ವರಂ ಕೆಫೆಯ ಬ್ರೂಕ್ ಫೀಲ್ಡ್ ಶಾಖೆಯಲ್ಲಿ ಸ್ಫೋಟ ಸಂಭವಿಸಿ 9 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಬಳಿಕ ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹೋಟೆಲ್ ಸಂಘ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಹೊಟೆಲ್ ಮಾಲಿಕರು ಹಾಗೂ ಇನ್ನಿತರ ಸಂಬಂಧಿತ ವ್ಯಕ್ತಿಗಳು ಹೋಟೆಲ್ಗಳಲ್ಲಿ ಭದ್ರತೆಯನ್ನು ಹೆಚ್ಚಿಸುವುದು, ಜಾಗರೂಕತೆಯನ್ನು ಕಾಪಾಡಿಕೊಳ್ಳಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (ಎಸ್ಒಪಿ) ಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಸ್ಥಳದಲ್ಲಿ ವರ್ಧಿತ ಭದ್ರತಾ ವ್ಯವಸ್ಥೆಯನ್ನು ಸ್ಥಾಪಿಸುವ ಬಗ್ಗೆ ಚರ್ಚಿಸುತ್ತದೆ ಮತ್ತು ಯಾವುದೇ "ಅನುಮಾನಾಸ್ಪದ ವ್ಯಕ್ತಿಗಳು" ಮತ್ತು ಇನ್ನು ಮುಂದೆ ಹೋಟೆಲ್ಗಳಲ್ಲಿ "ಅಲೆದಾಡುವ" ಚಲನವಲನಗಳ ವಿರುದ್ಧ ಶೂನ್ಯ ಸಹಿಷ್ಣುತೆಯ ವಿಧಾನವನ್ನು ಹೊಂದಲು ಹೋಟೆಲ್ ಸಂಘದ ಈ ಕ್ರಮ ಸಹಕಾರಿಯಾಗಲಿದೆ. ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ.ರಾವ್ ಮಾತನಾಡಿ, ಪೊಲೀಸ್ ತನಿಖೆ ಮುಗಿದ ನಂತರ ಶೀಘ್ರದಲ್ಲೇ ಪೊಲೀಸ್ ಇಲಾಖೆ, ಕೆಫೆ ಮತ್ತು ಹೋಟೆಲ್ ಮಾಲೀಕರು ಹಾಗೂ ಇತರ ಪಾಲುದಾರರೊಂದಿಗೆ ಸಭೆ ಕರೆದು ಚರ್ಚಿಸಿ ವಿವರವಾದ ಯೋಜನೆಯನ್ನು ರೂಪಿಸಲಾಗುವುದು. ಭವಿಷ್ಯದಲ್ಲಿ ಇಂತಹ ಅಹಿತಕರ ಘಟನೆಯನ್ನು ತಪ್ಪಿಸಲು ಭದ್ರತಾ ವ್ಯವಸ್ಥೆ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ.
Advertisement