ಸರ್ಕಾರಿ ನೌಕರರು ತಮ್ಮ ಆಸ್ತಿ ವಿವರಗಳನ್ನು ಆನ್‌ಲೈನ್‌ನಲ್ಲಿ ಘೋಷಿಸಬೇಕು: ಸಮಿತಿ ಶಿಫಾರಸು

ಎಲ್ಲವೂ ಅಂದುಕೊಂಡತೆ ನಡೆದರೆ, ರಾಜ್ಯ ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರಗಳನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಘೋಷಿಸಬೇಕಾಗುತ್ತದೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶನಿವಾರ ತನ್ನ ಏಳನೇ ಮತ್ತು ಕೊನೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.
ಮಾಜಿ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಿತಿ ವರದಿ ಸಲ್ಲಿಸಿದರು
ಮಾಜಿ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಿತಿ ವರದಿ ಸಲ್ಲಿಸಿದರು
Updated on

ಬೆಂಗಳೂರು: ಎಲ್ಲವೂ ಅಂದುಕೊಂಡತೆ ನಡೆದರೆ, ರಾಜ್ಯ ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರಗಳನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಘೋಷಿಸಬೇಕಾಗುತ್ತದೆ.

ಮಾಜಿ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶನಿವಾರ ತನ್ನ ಏಳನೇ ಮತ್ತು ಕೊನೆಯ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದೆ.

ರಾಜ್ಯ ಸರ್ಕಾರದ ಎಲ್ಲಾ ಗ್ರೂಪ್ ಎ, ಬಿ ಮತ್ತು ಸಿ ನೌಕರರು ಮತ್ತು ಸಾರ್ವಜನಿಕ ವಲಯದ ಮಂಡಳಿಗಳು ಮತ್ತು ನಿಗಮಗಳಲ್ಲಿ ಕೆಲಸ ಮಾಡುವ ನೌಕರರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರಗಳನ್ನು ಸಾರ್ವಜನಿಕ ಮಾಹಿತಿಗಾಗಿ ತಮ್ಮ ಇಲಾಖೆಯ ವೆಬ್‌ಸೈಟ್‌ಗಳಲ್ಲಿ ಘೋಷಿಸಬಹುದು ಎಂದು ಆಯೋಗ ಶಿಫಾರಸು ಮಾಡಿದೆ.

'ಭಾರತ ಸರ್ಕಾರವು ಐಎಎಸ್ ಅಧಿಕಾರಿಗಳು ಸಲ್ಲಿಸಿದ ಸ್ಥಿರಾಸ್ತಿ ರಿಟರ್ನ್ಸ್ ಅನ್ನು ಸಾರ್ವಜನಿಕ ಡೊಮೇನ್‌ನಲ್ಲಿ ಇರಿಸುತ್ತದೆ. ಅದೇ ರೀತಿಯಲ್ಲಿ, ರಾಜ್ಯ ಸರ್ಕಾರಿ ನೌಕರರು ತಮ್ಮ ವಿವರಗಳನ್ನು ನೀಡಬೇಕು'. ಇದಕ್ಕಾಗಿ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶಗಳನ್ನು ನೀಡಲು ಇ-ಆಡಳಿತ ಇಲಾಖೆ ಅಭಿವೃದ್ಧಿಪಡಿಸಿದ ನಿಯುಕ್ತಿ ಸಾಫ್ಟ್‌ವೇರ್ ಅನ್ನು ಇತರ ಸರ್ಕಾರಿ ಸಿಬ್ಬಂದಿ ಬಳಸುವಂತೆ ಆಯೋಗ ಶಿಫಾರಸು ಮಾಡಿದೆ.

ಕಾಗದ ರಹಿತ ಕಚೇರಿಗಳನ್ನು ಉತ್ತೇಜಿಸುವ ಸಲುವಾಗಿ, ಅನಿವಾರ್ಯ ಸಂದರ್ಭಗಳಲ್ಲಿ ಹೊರತುಪಡಿಸಿ, ಅಧೀನ ಅಧಿಕಾರಿಗಳು ಕಾಗದದ ಮೂಲಕ ಕಳುಹಿಸಿದ ಪತ್ರಗಳು ಮತ್ತು ಪ್ರಸ್ತಾವನೆಗಳನ್ನು ಇ-ಆಫೀಸ್‌ನಲ್ಲಿ ಕಳುಹಿಸಲು ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಆಯೋಗವು ಶಿಫಾರಸು ಮಾಡಿದೆ.

ಕಚೇರಿಗಳ ಕಾಪೌಂಡ್‌ಗಳಲ್ಲಿ ಬಿದ್ದಿರುವ ಹಳೆಯ ಕಡತಗಳು, ವರದಿಗಳು, ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, ವಾಹನಗಳ ಬಿಡಿಭಾಗಗಳನ್ನು ಗುರುತಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಸರ್ಕಾರಿ ಕಚೇರಿಗಳು, ಮಂಡಳಿಗಳು, ನಿಗಮಗಳು, ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯದ ಕಚೇರಿಗಳಲ್ಲಿ ಪ್ರತಿ ವರ್ಷ ಗಾಂಧಿ ಜಯಂತಿಗೂ ಹದಿನೈದು ದಿನಗಳ ಮೊದಲು ಸ್ವಚ್ಛತಾ ಅಭಿಯಾನವನ್ನು ಘೋಷಿಸಬಹುದು ಎಂದಿದೆ.

ಹೊಸದಾಗಿ ನೇಮಕಗೊಂಡ ಎಲ್ಲಾ ಸಿಬ್ಬಂದಿಯನ್ನು ಓರಿಯಂಟೇಶನ್ ಅಥವಾ ಇಂಡಕ್ಷನ್ ಕೋರ್ಸ್‌ಗೆ ಕಡ್ಡಾಯವಾಗಿ ಕಳುಹಿಸಬೇಕೆಂದು ಆಯೋಗವು ಶಿಫಾರಸು ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com