ಮಗನನ್ನು ಕೊಂದ ಬೆಂಗಳೂರು ಸಿಇಒ: ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ

ನಾಲ್ಕು ವರ್ಷದ ಮಗನನ್ನು ಕೊಂದ ಆರೋಪ ಹೊತ್ತಿರುವ ಸ್ಟಾರ್ಟ್‌ಅಪ್‌ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿ ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.
ಸುಚನಾ ಸೇಠ್
ಸುಚನಾ ಸೇಠ್

ಬೆಂಗಳೂರು: ನಾಲ್ಕು ವರ್ಷದ ಮಗನನ್ನು ಕೊಂದ ಆರೋಪ ಹೊತ್ತಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್‌ ಸಿಇಒ ಸುಚನಾ ಸೇಠ್ ಅವರ ಮಾನಸಿಕ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲು ಗೋವಾ ನ್ಯಾಯಾಲಯವು ಅನುಮತಿ ನೀಡಿದೆ.

ಮಾನಸಿಕ ಆರೋಗ್ಯ ಕಾಯಿದೆಯಡಿ ವೈದ್ಯರ ಮಂಡಳಿಯಿಂದ ಆಕೆಯ ಮಾನಸಿಕ ಸ್ಥಿತಿಯನ್ನು ಪರೀಕ್ಷಿಸುವಂತೆ ಸುಚನಾ ಸೇಠ್ ಅವರ ತಂದೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯ ಸಮಯದಲ್ಲಿ, ಪೊಲೀಸರು ಮನವಿಯನ್ನು ವಿರೋಧಿಸಿದ್ದರು., ಬಂಧನದಲ್ಲಿರುವಾಗ ಆಕೆಯ ಮಾನಸಿಕ ಆರೋಗ್ಯದ ಸ್ಥಿತಿಯನ್ನು ಮೌಲ್ಯಮಾಪನ ಮಾಡುವಾಗ ಮಾನಸಿಕ ಅಸ್ವಸ್ಥತೆಯ ಲಕ್ಷಣಗಳು ಕಂಡಿಲ್ಲ ಎಂದು ತಿಳಿಸಿದ್ದರು.

ನ್ಯಾಯಾಲಯವು ಸೋಮವಾರ ಅರ್ಜಿಯನ್ನು ಅನುಮತಿಸಿದ ನಂತರ, ಆಕೆಯ ಮಾನಸಿಕ ಸ್ಥಿತಿಯ ಹೊಸ ಪರೀಕ್ಷೆಗಾಗಿ ಪೊಲೀಸರು ಸೇಠ್ (39) ನನ್ನು ವೈದ್ಯಕೀಯ ಮಂಡಳಿಯ ಮುಂದೆ ಹಾಜರುಪಡಿಸಬೇಕಾಗುತ್ತದೆ ಎಂದು ಸುಚನಾ ಸೇಠ್ ತಂದೆ ಪರ ವಕೀಲರು ತಿಳಿಸಿದ್ದಾರೆ.

ಸುಚನಾ ಸೇಠ್
4 ವರ್ಷದ ಮಗನ ಹತ್ಯೆ: ಬೆಂಗಳೂರು ಮೂಲದ ಸುಚನಾ ಸೇಠ್ ಗೆ 13 ದಿನ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

ಪ್ರಕರಣದ ತನಿಖೆ ನಡೆಸುತ್ತಿರುವ ಗೋವಾ ಪೊಲೀಸರು, ಈ ಹಿಂದೆ ಮನವಿಯನ್ನು ವಿರೋಧಿಸಿದ್ದರು, ಜನವರಿಯಲ್ಲಿ ಆಕೆ ಬಂಧನದಲ್ಲಿದ್ದ ಅವಧಿಯಲ್ಲಿ ಆಕೆಯ ಮಾನಸಿಕ ಆರೋಗ್ಯದ ಮೌಲ್ಯಮಾಪನ ಸೇರಿದಂತೆ ನಿಯಮಿತ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಅವರು ತಮ್ಮ ಮೌಲ್ಯಮಾಪನಗಳಲ್ಲಿ ಸ್ಪಷ್ಟ ಮತ್ತು ತರ್ಕಬದ್ಧ ಉತ್ತರಗಳನ್ನು ನೀಡಿದರು. ಅವರು ಯಾವುದೇ ಸಕ್ರಿಯ ಸಾವಿನ ಆಶಯಗಳನ್ನು ಅಥವಾ ಆತ್ಮಹತ್ಯೆ ಪ್ರವೃತ್ತಿಯನ್ನು ವರದಿ ಮಾಡಿಲ್ಲ. ಆಕೆಯ ಪ್ರತಿಕ್ರಿಯೆಗಳಲ್ಲಿ ಯಾವುದೇ ವಿಕೃತ ಮನಸ್ಥಿತಿಯ ಲಕ್ಷಣಗಳು ಕಂಡುಬಂದಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ ಆರಂಭಿಸಿರುವ ಸೇಠ್, ಗೋವಾಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಕ್ಯಾಂಡೋಲಿಮ್ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ಮಗನನ್ನು ಕೊಂದ ಆರೋಪ ಹೊತ್ತಿದ್ದಾರೆ. ತನ್ನ ಪತಿಯೊಂದಿಗೆ ವಿಚ್ಛೇದನದ ವಿವಾದದಲ್ಲಿ ಸಿಲುಕಿರುವ AI ಸ್ಟಾರ್ಟ್ ಅಪ್ ಸಿಇಒ, ಜನವರಿ 8 ರಂದು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಿಂದ ತನ್ನ ಮಗನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಟ್ಯಾಕ್ಸಿಯಲ್ಲಿ ಪ್ರಯಾಣಿಸುತ್ತಿದ್ದಾಗ ಬಂಧಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com