ಬೆಂಗಳೂರು: ವಿವಾಹ ವಾರ್ಷಿಕೋತ್ಸವಕ್ಕೆ ಉಡುಗೊರೆ ನೀಡಲಿಲ್ಲ ಎಂದು ಪತಿಗೆ ಚಾಕುವಿನಿಂದ ಇರಿದ ಮಹಿಳೆ

ವಿವಾಹ ವಾರ್ಷಿಕೋತ್ಸವದಂದು ಉಡುಗೊರೆ ನೀಡದ ಕಾರಣ ಕೋಪಗೊಂಡ ತನ್ನ ಪತ್ನಿಯು ಚಾಕುವಿನಿಂದ ತನಗೆ ಇರಿದಿದ್ದಾರೆ ಎಂದು ಆರೋಪಿಸಿ 37 ವರ್ಷದ ವ್ಯಕ್ತಿಯೊಬ್ಬರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ವಿವಾಹ ವಾರ್ಷಿಕೋತ್ಸವದಂದು ಉಡುಗೊರೆ ನೀಡದ ಕಾರಣ ಕೋಪಗೊಂಡ ತನ್ನ ಪತ್ನಿಯು ಚಾಕುವಿನಿಂದ ತನಗೆ ಇರಿದಿದ್ದಾರೆ ಎಂದು ಆರೋಪಿಸಿ 37 ವರ್ಷದ ವ್ಯಕ್ತಿಯೊಬ್ಬರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಫೆಬ್ರುವರಿ 27 ರಂದು ತಾನು ಗಾಢ ನಿದ್ದೆಯಲ್ಲಿದ್ದಾಗ ಪತ್ನಿ ತನ್ನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದರಿಂದ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವ್ಯಕ್ತಿ ಪೊಲೀಸರಿಗೆ ನೀಡಿರುವ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ತನ್ನ ಅಜ್ಜನ ನಿಧನದಿಂದಾಗಿ ಆಕೆಗೆ ಉಡುಗೊರೆ ನೀಡಲು ಸಾಧ್ಯವಾಗಲಿಲ್ಲ ಎಂದು ಆ ವ್ಯಕ್ತಿ ಹೇಳಿದ್ದಾರೆ.

ದಂಪತಿಗೆ ಒಂದು ಮಗುವಿದೆ ಮತ್ತು ಆಗ್ನೇಯ ಬೆಂಗಳೂರಿನ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ವಾಸಿಸುತ್ತಿದ್ದಾರೆ.

ಸಾಂದರ್ಭಿಕ ಚಿತ್ರ
ಕೊಡಗಿನಲ್ಲಿ ವಿದ್ಯುತ್ ಬಿಲ್ ನೀಡಲು ಬಂದಿದ್ದ ಮೀಟರ್ ರೀಡರ್‌ಗೆ ಚಾಕು ಇರಿತ

ಬೆಳ್ಳಂದೂರು ಪೊಲೀಸರು ಐಪಿಸಿ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಈ ಸಂಬಂಧ ಯಾರನ್ನೂ ಬಂಧಿಸಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com