ಬೆಂಗಳೂರು: 'ಜೈ ಅಲ್ಲು ಅರ್ಜುನ್' ಹೇಳುವಂತೆ ಒತ್ತಾಯಿಸಿ ಪ್ರಭಾಸ್ ಅಭಿಮಾನಿಗೆ ಥಳಿತ, ವಿಡಿಯೋ ವೈರಲ್!

ಬೆಂಗಳೂರಿನಲ್ಲಿ ಟಾಲಿವುಡ್ ನಟರ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದ್ದು ಪ್ರಭಾಸ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಕೈ-ಕೈ ಮಿಲಾಯಿಸಿದ್ದಾರೆ.
ಅಭಿಮಾನಿಗಳ ಹೊಡೆದಾಟ
ಅಭಿಮಾನಿಗಳ ಹೊಡೆದಾಟ

ಬೆಂಗಳೂರು: ಬೆಂಗಳೂರಿನಲ್ಲಿ ಟಾಲಿವುಡ್ ನಟರ ಅಭಿಮಾನಿಗಳ ನಡುವೆ ಮಾರಾಮಾರಿ ನಡೆದಿದ್ದು ಪ್ರಭಾಸ್ ಹಾಗೂ ಅಲ್ಲು ಅರ್ಜುನ್ ಅಭಿಮಾನಿಗಳು ಕೈ-ಕೈ ಮಿಲಾಯಿಸಿದ್ದಾರೆ.

ಕ್ರಿಕೆಟ್ ಆಡುವ ವೇಳೆ ಇಬ್ಬರು ನಟರ ಅಭಿಮಾನಿಗಳ ನಡುವೆ ಮಾತಿಗೆ ಮಾತು ಬೆಳೆದು ಬಡಿದಾಡಿಕೊಂಡಿದ್ದು ಈ ವಿಡಿಯೊ ವೈರಲ್ ಆಗುತ್ತಿದೆ. ಪ್ರಭಾಸ್ ಅಭಿಮಾನಿಯೊಬ್ಬನನ್ನು ಕೆಲ ಅಲ್ಲು ಅರ್ಜುನ್ ಅಭಿಮಾನಿಗಳು ಸೇರಿ ಥಳಿಸಿದ್ದಾರೆ.

ಅಲ್ಲು ಅರ್ಜುನ್ ಅಭಿಮಾನಿಗಳು ಜೈ ಅಲ್ಲು ಅರ್ಜುನ್ ಎಂದು ಹೇಳು ಹೇಳು ಎಂದು ಬಲವಂತ ಮಾಡಿ ಹಲ್ಲೆ ನಡೆಸಿದ್ದಾರೆ. ಸದ್ಯ ಈ ಘಟನೆ ಪೊಲೀಸರು ಠಾಣೆ ಮೆಟ್ಟಿಲೇರಿದೆ.

ಪ್ಯಾನ್ ಇಂಡಿಯಾ ನಟ ಪ್ರಭಾಸ್ ಕಲ್ಕಿ 2898 ಎಡಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇನ್ನು ಅಲ್ಲು ಅರ್ಜುನ್ ಪುಷ್ಪ 2 ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com