ಬಾಗಲಕೋಟೆ: ಪ್ರೇಯಸಿ ಭೇಟಿಗೆ ನಿರಾಕರಿಸಿದ್ದಕ್ಕೆ ಕೋಪಗೊಂಡು ಆಕೆಯ ತಂದೆಯನ್ನು ಕೊಂದ ಯುವಕ

ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ

ಬಾಗಲಕೋಟೆ: ತನ್ನನ್ನು ಪ್ರೇಯಸಿಯಿಂದ ಬೇರ್ಪಡಿಸಿದ್ದಕ್ಕೆ ಕೋಪಗೊಂಡ ಯುವಕನೊಬ್ಬ ತನ್ನ ಗೆಳತಿಯ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ಆಘಾತಕಾರಿ ಘಟನೆ ಬಾಗಲಕೋಟೆ ಜಿಲ್ಲೆಯ ಭಗವತಿ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ದಲಿತ ಯುವಕ ಪ್ರವೀಣ ಕಾಂಬಳೆ ಎಂಬಾತ ಮೇಲ್ಜಾತಿಗೆ ಸೇರಿದ 52 ವರ್ಷದ ಸಂಗನಗೌಡ ಪಾಟೀಲರ ಪುತ್ರಿಯೊಂದಿಗೆ ಸಂಬಂಧ ಹೊಂದಿದ್ದರು.

ಆದರೆ, ಸಂಗನಗೌಡ ಪಾಟೀಲ ಅವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ತನ್ನ ಮಗಳಿಂದ ದೂರ ಉಳಿಯುವಂತೆ ಪ್ರವೀಣ ಕಾಂಬಳೆಗೆ ತಾಕೀತು ಮಾಡಿದ್ದರು.

ಪ್ರಾತಿನಿಧಿಕ ಚಿತ್ರ
ಮದುವೆಗೆ ನಕಾರ: ಪ್ರೇಯಸಿ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಆ ಘಟನೆ ನಂತರ ತನ್ನ ತಂದೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಯುವತಿ ಯುವಕನನ್ನು ಭೇಟಿಯಾಗಲು ನಿರಾಕರಿಸಿದ್ದಳು. ನಂತರ ಕುಪಿತಗೊಂಡ ಆರೋಪಿ ಸಂಗನಗೌಡ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ
ಹೊಸಕೋಟೆ: ಪ್ರೇಮ ವೈಫಲ್ಯ, ಪ್ರೇಯಸಿ ಕೊಂದು ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿ!

ಕೆಲ ದಿನಗಳ ಹಿಂದಷ್ಟೇ ಮಗಳನ್ನು ಭೇಟಿಯಾಗಲು ಯತ್ನಿಸಿದ್ದಕ್ಕೆ ಕುಪಿತಗೊಂಡ ಸಂಗನಗೌಡ ಪಾಟೀಲ, ಪ್ರವೀಣ ಕಾಂಬಳೆಗೆ ಥಳಿಸಿದ್ದರು.

ಬಾಗಲಕೋಟೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com