ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಜನವರಿಯಲ್ಲೇ ಸುಳಿವು ನೀಡಿದ್ದ kannadaprabha.com ಅಂಕಣ!

ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಕನ್ನಡಪ್ರಭ.ಕಾಮ್ ಅಂಕಣ
ಕನ್ನಡಪ್ರಭ.ಕಾಮ್ ಅಂಕಣ
Updated on

ಬೆಂಗಳೂರು: ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಳೆದ 2-3 ದಿನಗಳಿಂದಲೂ ಕುತೂಹಲ ಮೂಡಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪುವ ಸಾಧ್ಯವಿದೆ ಎಂದು ಕಳೆದ 2 ತಿಂಗಳ ಹಿಂದೆಯೇ ಅಂದರೆ ಜನವರಿ 05 ರಂದೇ ಕನ್ನಡಪ್ರಭ.ಕಾಮ್ ನ ಸುದ್ದಿ ವಿಶ್ಲೇಷಣೆ ಅಂಕಣದಲ್ಲಿ ಬರೆಯಲಾಗಿತ್ತು.

ಲೋಕಸಭೆ: ಬಿಜೆಪಿಗೆ ಆ ನಾಲ್ಕು ಕ್ಷೇತ್ರಗಳದ್ದೇ ತಲೆನೋವು ಎಂಬ ಶಿರ್ಷಿಕೆಯಡಿಯಲ್ಲಿ ಜ.05 ರಂದು ಪ್ರಕಟವಾಗಿದ್ದ ಅಂಕಣದಲ್ಲಿ ಮೈಸೂರು-ಕೊಡಗು, ಬೆಂಗಳೂರು ಉತ್ತರ, ಉಡುಪಿ ಚಿಕ್ಕಮಗಳೂರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಬದಲಾವಣೆಯಾಗುವ ಸಾಧ್ಯತೆ ಇದ್ದು ಬಿಜೆಪಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿದೆ ಎಂದು ವಿಶ್ಲೇಷಿಸಲಾಗಿತ್ತು. ಅದರಂತೆಯೇ ಈಗ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ, ಉಡುಪಿ ಚಿಕ್ಕಮಗಳೂರು, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಬಿಜೆಪಿ ಪಟ್ಟಿ ಪ್ರಕಟಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com