ಬೆಂಗಳೂರು: ರಸ್ತೆ ಅಗಲೀಕರಣಕ್ಕೆ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ

ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.
ಕೃಷ್ಣ ಬೈರೇಗೌಡ
ಕೃಷ್ಣ ಬೈರೇಗೌಡ
Updated on

ಬೆಂಗಳೂರು: ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆಗೆ ಬರಲಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಉದ್ದೇಶಕ್ಕಾಗಿ ಅರಮನೆ ಮೈದಾನದ ಜಾಗ ಸ್ವಾಧೀನಕ್ಕೆ ರಾಜ್ಯ ಸಚಿವ ಸಂಪುಟ ಗುರುವಾರ ನಿರ್ಧರಿಸಿದೆ.

ಸುಪ್ರೀಂಕೋರ್ಟ್ ಸೂಚನೆ ಹೊರತಾಗಿಯೂ ಭೂ ಸ್ವಾಧೀನಪಡಿಸಿಕೊಂಡು ಪರಿಹಾರ ನೀಡದ ಸಂಬಂಧ ಸುಪ್ರೀಂನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಾಗಿತ್ತು.ಈ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ಸಚಿವ ಸಂಪುಟದಲ್ಲಿ ಈ ನಿರ್ಧಾರ ಮಾಡಲಾಗಿದೆ. ಭೂ ಸ್ವಾಧೀನಕ್ಕೆ ವಿರುದ್ಧವಾಗಿ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕುಗಳನ್ನು (ಟಿಡಿಆರ್) ನೀಡಲು ಸಂಪುಟ ನಿರ್ಧರಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದ್ದಿಗಾರರಿಗೆ ತಿಳಿಸಿದರು.

ಸಚಿವರ ಪ್ರಕಾರ, ಸುಪ್ರೀಂ ಕೋರ್ಟ್ ನಗರಾಭಿವೃದ್ಧಿ ಇಲಾಖೆಯಲ್ಲಿ ಮುಖ್ಯ ಕಾರ್ಯದರ್ಶಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಬೆಂಗಳೂರು ನಗರ ಆಡಳಿತದ ನಗರ ಸ್ಥಳೀಯ ಸಂಸ್ಥೆಯಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರ ಹಾಜರಾತಿಯನ್ನು ಕೋರಿದೆ.

2006ರಲ್ಲಿ ಕರ್ನಾಟಕ ಸರ್ಕಾರ ಮೇಖ್ರಿ ವೃತ್ತದ ಬಳಿ 15.5 ಎಕರೆ ಅರಮನೆ ಮೈದಾನವನ್ನು ರಸ್ತೆ ವಿಸ್ತರಣೆಗಾಗಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿತ್ತು. ಅದರಂತೆ ಅರಮನೆ ಮೈದಾನದ ಒಳಗೆ ಕಾಂಪೌಂಡ್ ಗೋಡೆ ನಿರ್ಮಿಸಲಾಗಿತ್ತು, ಆದರೆ ಹಿಂದಿನ ಬಿಜೆಪಿ ಸರ್ಕಾರ ಅದರ ಅಗತ್ಯವಿಲ್ಲ ಎಂದು ನಿರ್ಧರಿಸಿತು. ಈ ನಡುವೆ 2006-07ರಲ್ಲಿ ಅರಮನೆ ಮೈದಾನದೊಳಗೆ ರಾಜ್ಯ ಸರ್ಕಾರ ಕಾಂಪೌಂಡ್ ಗೋಡೆ ನಿರ್ಮಾಣ ಮಾಡಿತ್ತು. ಹೀಗಾಗಿ ಅರಮನೆ ಮಾಲೀಕರು ಎಂದು ಹೇಳಿಕೊಳ್ಳುವವರು ಕೋರ್ಟ್ ಮೊರೆ ಹೋಗಿದ್ದರು.

ಸುಪ್ರೀಂಕೋರ್ಟ್ ಈ ಪ್ರಕರಣವನ್ನು ನ್ಯಾಯಾಂಗ ನಿಂದನೆ ಪ್ರಕರಣವನ್ನಾಗಿ ಪರಿವರ್ತಿಸಿತು. ಭೂಮಿ ಸ್ವಾಧೀನಪಡಿಸಿಕೊಂಡಿರುವುದರಿಂದ ಪರಿಹಾರ ನೀಡಬೇಕು. ಜಮೀನು ಅಗತ್ಯವಿದೆಯೇ ಅಥವಾ ಇಲ್ಲವೇ ಎಂಬ ತೀರ್ಮಾನಕ್ಕೆ ಬರುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ ಎಂದು ಕೃಷ್ಣಬೈರೇಗೌಡ ಹೇಳಿದರು. 1996 ರಲ್ಲಿ ಕರ್ನಾಟಕ ಸರ್ಕಾರವು ಕಾನೂನಿನ ಮೂಲಕ ಅರಮನೆ ಮೈದಾನವನ್ನು ಉದ್ಯಾನವನ ಮತ್ತು ಬಯಲು ಜಾಗ ಎಂದು ಘೋಷಿಸಿತ್ತು. ಈ ಕಾನೂನನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಆದರೆ, ಮೈಸೂರು ರಾಜಮನೆತನದವರು ಈ ಕಾಯ್ದೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದು, ಯಥಾಸ್ಥಿತಿಗೆ ಆದೇಶ ನೀಡಿದೆ ಎಂದು ಅವರು ವಿವರಿಸಿದರು.

ಈ ವಿಷಯವನ್ನು ಯಥಾಸ್ಥಿತಿಯಲ್ಲಿ ಏಕೆ ಮುಂದುವರಿಸಲಾಗಿದೆ ಎಂದು ಸಿಎಂ ಗುರುವಾರ ಕೇಳಿದ್ದಾರೆ. ಪ್ರಕರಣದ ವಿರುದ್ಧ ಸರ್ಕಾರ ಬಲವಾಗಿ ಹೋರಾಡಲಿಲ್ಲ, ನಮ್ಮ ಮೂಲ ದಾವೆಯನ್ನು ಪ್ರಸ್ತುತಪಡಿಸಲು ಉತ್ತಮ ವಕೀಲರನ್ನು ನೇಮಿಸಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದು, ಮೂಲ ಮೊಕದ್ದಮೆ ಇತ್ಯರ್ಥಗೊಂಡ ನಂತರ ಉಳಿದ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com