ಜಿಎಂ ಸಿದ್ದೇಶ್ವರ್​ ಪತ್ನಿಗೆ ಬಿಜೆಪಿ ಟಿಕೆಟ್​ ನೀಡಿದ್ದಕ್ಕೆ ಆಕ್ರೋಶ: ಪೆಟ್ರೋಲ್​ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ

ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.
ಯುವಕ ಆತ್ಮಹತ್ಯೆಗೆ ಯತ್ನ
ಯುವಕ ಆತ್ಮಹತ್ಯೆಗೆ ಯತ್ನ

ದಾವಣಗೆರೆ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬುಧವಾರ ಬಿಡುಗಡೆ ಮಾಡಿದ್ದು, ಹಲವು ಹಾಲಿ ಸಂಸದರಿಗೆ ಟಿಕೆಟ್​ ನಿರಾಕರಿಸಲಾಗಿದೆ. ಅದರಂತೆ ದಾವಣಗೆರೆ ಹಾಲಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬದಲಿಗೆ ಅವರ ಪತ್ನಿ ಗಾಯತ್ರಿ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಈ ಬಾರಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್​ ಅವರು ಸಹ ಬಿಜೆಪಿ ಟಿಕೆಟ್​ ಆಕಾಂಕ್ಷಿ ಆಗಿದ್ದರು. ಆದರೆ ಅವರಿಗೆ ಟಿಕೆಟ್ ನಿರಾಕರಿಸಿ ಸಿದ್ದೇಶ್ವರ್ ಅವರ ಪತ್ನಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶಗೊಂಡ ಅವರ ಬೆಂಬಲಿಗನೊಬ್ಬ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದೆ.

ಇಂದು ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿರುವ ಎಸ್.ಎ.ರವೀಂದ್ರನಾಥ್​ ನಿವಾಸದ ಬಳಿಯೇ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಯುವಕ ಆತ್ಮಹತ್ಯೆಗೆ ಯತ್ನ
ಲೋಕಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಪ್ರತಾಪ್ ಸಿಂಹಗೆ ಕೊಕ್, ಯದುವೀರ್ ಗೆ ಟಿಕೆಟ್

ಇನ್ನು ಸಿದ್ದರೇಶ್ವರ್ ಅವರ ಪತ್ನಿಗೆ ದಾವಣಗೆರೆ ಟಿಕೆಟ್​ ನೀಡಿದ್ದಕ್ಕೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶ ಇಲ್ಲ. ಸರ್ವೆಯಲ್ಲಿಯೂ ಕೂಡ ಸಂಸದ ಸಿದ್ದೇಶ್ವರ ಕುಟುಂಬದ ಹೆಸರಿಲ್ಲ. ಸರ್ವೆ ಸಂಪೂರ್ಣ ಸಂಸದ ಸಿದ್ದೇಶ್ವರ್​ ವಿರುದ್ಧ ಬಂದಿದೆ. ಗೂಂಡಾಗಳನ್ನ ಇಟ್ಕೊಂಡು ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com