ಬೆಂಗಳೂರು: ಘನತ್ಯಾಜ್ಯ ನಿರ್ವಹಣೆ ಕುರಿತು BBMP ಜಾಗೃತಿ ಅಭಿಯಾನ

ದಕ್ಷಿಣ ವಲಯದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ಬಿಬಿಎಂಪಿ ಭಾನುವಾರ ಜಾಗೃತಿ ಅಭಿಯಾನ ನಡೆಸಿತು. ದಕ್ಷಿಣ ವಲಯ ಆಯುಕ್ತೆ ವಿನೋತ್ ಪ್ರಿಯಾ ಆರ್ ನೇತೃತ್ವದಲ್ಲಿ, ಪಾಲಿಕೆ ಅಧಿಕಾರಿಗಳು ಬೀದಿ ನಾಟಕಗಳನ್ನು ಪ್ರದರ್ಶಿಸಿದರು ಮತ್ತು ಕರಪತ್ರಗಳನ್ನು ಹಂಚಿದರು.
ಬಿಬಿಎಂಪಿ ದಕ್ಷಿಣ ವಲಯದ ಅಧಿಕಾರಿಗಳು ಭಾನುವಾರ ಬೆಂಗಳೂರಿನಲ್ಲಿ ತ್ಯಾಜ್ಯ ವಿಂಗಡಣೆ ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶಿಸಿದರು.
ಬಿಬಿಎಂಪಿ ದಕ್ಷಿಣ ವಲಯದ ಅಧಿಕಾರಿಗಳು ಭಾನುವಾರ ಬೆಂಗಳೂರಿನಲ್ಲಿ ತ್ಯಾಜ್ಯ ವಿಂಗಡಣೆ ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಪ್ರದರ್ಶಿಸಿದರು.
Updated on

ಬೆಂಗಳೂರು: ದಕ್ಷಿಣ ವಲಯದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ಬಿಬಿಎಂಪಿ ಭಾನುವಾರ ಜಾಗೃತಿ ಅಭಿಯಾನ ನಡೆಸಿತು. ದಕ್ಷಿಣ ವಲಯ ಆಯುಕ್ತೆ ವಿನೋತ್ ಪ್ರಿಯಾ ಆರ್ ನೇತೃತ್ವದಲ್ಲಿ, ಪಾಲಿಕೆ ಅಧಿಕಾರಿಗಳು ಬೀದಿ ನಾಟಕಗಳನ್ನು ಪ್ರದರ್ಶಿಸಿದರು ಮತ್ತು ಕರಪತ್ರಗಳನ್ನು ಹಂಚಿದರು. ತ್ಯಾಜ್ಯವನ್ನು ಹಸಿ, ಒಣಗಿದ ಮತ್ತು ಸ್ಯಾನಿಟರಿ ತ್ಯಾಜ್ಯಗಳಾಗಿ ವಿಂಗಡಿಸುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

'ಪ್ರತಿ ದಿನ ಮನೆ ಬಾಗಿಲಿಗೆ ಬರುವ ಆಟೋಗಳ ಮೂಲಕ ಹಸಿ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ. ಒಣ ತ್ಯಾಜ್ಯವನ್ನು ವಾರಕ್ಕೆ ಎರಡು ಬಾರಿ ಸಂಗ್ರಹಿಸಲಾಗುತ್ತದೆ' ಎಂದು ವಿನೋತ್ ಪ್ರಿಯಾ ಹೇಳಿದರು.

ಕಸವನ್ನು ಬಿಬಿಎಂಪಿಗೆ ಮಾತ್ರ ಹಸ್ತಾಂತರಿಸುವಂತೆ ನಿವಾಸಿಗಳಿಗೆ ಕರೆ ನೀಡಿದರು ಮತ್ತು ಅದನ್ನು ಖಾಲಿ ಪ್ಲಾಟ್‌ಗಳಿಗೆ ಅಥವಾ ರಸ್ತೆಬದಿಯಲ್ಲಿ ಎಸೆಯುವುದನ್ನು ತಡೆಯುವಂತೆ ಸೂಚಿಸಿದರು.

ಬಿಬಿಎಂಪಿ ಅಧಿಕಾರಿಗಳು ಏಕಬಳಕೆಯ ಪ್ಲಾಸ್ಟಿಕ್ ನಿಷೇಧದ ಬಗ್ಗೆಯೂ ಪ್ರಚಾರ ಮಾಡಿದರು. ಸಾರಕ್ಕಿ ಮತ್ತು ಮಡಿವಾಳ ಮಾರುಕಟ್ಟೆಗಳಲ್ಲಿ ಜನರಿಗೆ ಬಟ್ಟೆಯ ಚೀಲಗಳನ್ನು ವಿತರಿಸಿದರು. ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆಗೆ ನಿಷೇಧವಿದೆ ಎಂದು ಪುನರುಚ್ಚರಿಸಿದ ಬಿಬಿಎಂಪಿ ಅಧಿಕಾರಿಗಳು, ಬಟ್ಟೆ ಚೀಲಗಳು ಮತ್ತು ಇತರ ಪರಿಸರ ಸ್ನೇಹಿ ವಸ್ತುಗಳನ್ನು ಕೊಂಡೊಯ್ಯಲು ಮತ್ತು ಪ್ಲಾಸ್ಟಿಕ್ ಚೀಲಗಳನ್ನು ಬಳಸದಂತೆ ಜನರನ್ನು ಕೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com