ವಿಜಯಪುರ: ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವು, ಅವಳಿ ಮಕ್ಕಳು ಅನಾಥ; ಆಸ್ಪತ್ರೆಯ ನಾಲ್ವರು ಸಿಬ್ಬಂದಿ ಅಮಾನತು!

ಹೆರಿಗೆ ವೇಳೆ ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಿಜಯಪುರ: ಹೆರಿಗೆ ವೇಳೆ ಬ್ಲಡ್ ಗ್ರೂಪ್ ಬದಲಾಗಿ ಬಾಣಂತಿ ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಬಬಲೇಶ್ವರ ತಾಲೂಕಿನ ದದಾಮಟ್ಟಿ ಗ್ರಾಮದ ಶಾರದಾ ದೊಡ್ಡಮನಿ ಅವರು ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ನಂತರ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡಿದ್ದ ಶಾರದಾ ದೊಡ್ಡಮನಿ ಅವರಿಗೆ ಬೇರೆ ಗುಂಪಿನ ರಕ್ತ ನೀಡಿದ್ದರಿಂದ ಆಕೆ ಸಾವನ್ನಪ್ಪಿದ್ದರು. ಈ ಘಟನೆಗೆ ಕಾರಣ ಮತ್ತು ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಜಿಲ್ಲಾಸ್ಪತ್ರೆಯ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಸಂಗ್ರಹ ಚಿತ್ರ
ಬೆಂಗಳೂರು: ಖಾಸಗಿ ಬ್ಯಾಂಕ್ ಸಿಬ್ಬಂದಿ ಕಿರುಕುಳ; ಬೆಂಕಿ ಹಚ್ಚಿಕೊಂಡು ತಾಯಿ ಮಕ್ಕಳು ಆತ್ಮಹತ್ಯೆ!

ಹೆರಿಗೆ ವೇಳೆ ಗಂಡು ಹಾಗೂ ಹೆಣ್ಣು ಸೇರಿ ಅವಳಿ ಮಕ್ಕಳಿಗೆ ಶಾರದಾ ಜನ್ಮ ನೀಡಿದ್ದರು. ಶಾರದಾ ಸಾವಿನಿಂದಾಗಿ ಮೂರು ವರ್ಷದ ಮಗು ಹಾಗೂ ಅವಳಿ ಮಕ್ಕಳು ಇದೀಗ ಅನಾಥರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com