ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್
ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್

ಬೆಂಗಳೂರು: ಜನ ಸಾಂದ್ರತೆ ಪ್ರದೇಶಗಳಿಗೆ ಪ್ರತಿ ದಿನ 1 ಲಕ್ಷ ಲೀಟರ್‌ ಕಾವೇರಿ ನೀರು ಉಚಿತವಾಗಿ ಸರಬರಾಜು

ನಗರದಲ್ಲಿ ಬಡ ಜನರು ಹೆಚ್ಚಾಗಿ ವಾಸಿಸುವ ಕೊಳಚೆ ಪ್ರದೇಶಗಳು ಹಾಗೂ ಜನಸಾಂದ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದ್ದು, ಪ್ರತಿನಿತ್ಯ ಈ ಪ್ರದೇಶಗಳಿಗೆ 1 ಲಕ್ಷ ಲೀಟರ್‌ ಗಳಷ್ಟು ಕುಡಿಯುವ ನೀರನ್ನ ಉಚಿತವಾಗಿ ಸರಬರಾಜು ಮಾಡಲಾಗುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ. ವಿ. ರಾಮ್‌ ಪ್ರಸಾತ್ ಮನೋಹರ್ ತಿಳಿಸಿದರು.

ಬೆಂಗಳೂರು: ನಗರದಲ್ಲಿ ಬಡ ಜನರು ಹೆಚ್ಚಾಗಿ ವಾಸಿಸುವ ಕೊಳಚೆ ಪ್ರದೇಶಗಳು ಹಾಗೂ ಜನಸಾಂದ್ರತೆ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗುತ್ತಿದ್ದು, ಪ್ರತಿನಿತ್ಯ ಈ ಪ್ರದೇಶಗಳಿಗೆ 1 ಲಕ್ಷ ಲೀಟರ್‌ ಗಳಷ್ಟು ಕುಡಿಯುವ ನೀರನ್ನ ಉಚಿತವಾಗಿ ಸರಬರಾಜು ಮಾಡಲಾಗುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ. ವಿ. ರಾಮ್‌ ಪ್ರಸಾತ್ ಮನೋಹರ್ ತಿಳಿಸಿದರು.

ನಗರದ ನಾಯಂಡಹಳ್ಳಿ-ಪಂತರಪಾಳ್ಯದ ಅಂಬೇಡ್ಕರ್ ಸ್ಲಂ, ಗಾಂಧಿನಗರ ಮತ್ತು ಬಂಗಾರಪ್ಪ ನಗರ ಸ್ಲಂಗಳಿಗೆ ಭಾನುವಾರ ಬೆಳಗ್ಗೆ ಭೇಟಿ ನೀಡಿ, ಪರಿಶೀಲಿಸಿದ ಅವರು, ಅಂಬೇಡ್ಕರ್ ಸ್ಲಂ ನಲ್ಲಿ 34 ಬ್ಲಾಕ್‌ಗಳಲ್ಲಿ 1088 ಮನೆಗಳಿದ್ದು, ಸುಮಾರು 8 ಸಾವಿರ ಜನರು ವಾಸಿಸುತ್ತಿದ್ದಾರೆ. ಸ್ಲಂ ಬೋರ್ಡ್ ವತಿಯಿಂದ ಕೊರೆಸಲಾಗಿದ್ದ ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಕುಸಿದಿದೆ. 22 ಸಿಂಟೆಕ್ಸ್‌ ಟ್ಯಾಂಕ್‌ಗಳನ್ನು ಈ ಪ್ರದೇಶಧ ವಿವಿಧೆಡೆ ಇಡಲಾಗಿದ್ದು, ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರನ್ನ ಪೂರೈಸಲಾಗುತ್ತಿದೆ. ಪ್ರತಿ ದಿನ ಎರಡು ಬಾರಿ ಸಿಂಟೆಕ್ಸ್‌ ಟ್ಯಾಂಕ್‌ಗಳಿಗೆ ನೀರು ತುಂಬಿಸಲಾಗುತ್ತಿದ್ದು, ಪ್ರತಿ ದಿನ ಒಂದು ಲಕ್ಷ ಲೀಟರ್ ನೀರು ಪೂರೈಸಲಾಗುತ್ತಿದೆ ಎಂದು ಹೇಳಿದರು.

ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷ ಡಾ. ವಿ. ರಾಮ್ ಪ್ರಸಾತ್ ಮನೋಹರ್
ಬೆಂಗಳೂರಿನಲ್ಲಿ ಜಲಕ್ಷಾಮ: ಸಾವಿರಾರು ಮರ-ಗಿಡಗಳಿಗೆ ನೀರುಣಿಸಲು ಲಾಲ್​ಬಾಗ್​​ ಹೆಣಗಾಟ!

ಈ ಪ್ರದೇಶದಲ್ಲಿರುವವರು ಖಾಸಗಿ ಟ್ಯಾಂಕರ್‌ಗಳನ್ನು ಅವಲಂಬಿಸಿಲ್ಲ, ಅವರಿಗೆ ಆರ್ಥಿಕವಾಗಿ ಹೊರೆ ಆಗಬಾರದು ಎನ್ನುವ ಹಿನ್ನಲೆಯಲ್ಲಿ ಜಲಮಂಡಳಿ ವತಿಯಿಂದಲೇ ಉಚಿತವಾಗಿ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದರು. ಅಂಬೇಡ್ಕರ್ ಸ್ಲಂ ಗೆ ದಿನಕ್ಕೆ ಎರಡು ಬಾರಿ ನೀರು ಸರಬರಾಜು ಮಾಡಲಾಗುತ್ತಿದೆ. ಹೆಚ್ಚಿನ ನೀರಿನ ಬೇಡಿಕೆ ಬರುತ್ತಿದ್ದು, ಆದ್ಯತೆ ನೋಡಿಕೊಂಡು ತಕ್ಷಣವೇ ನೀರು ಪೂರೈಸುವುದಾಗಿ ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್ ಮನೋಹರ್ ಭರವಸೆ ನೀಡಿದರು.

ನಗರದ ಜನತೆಗೆ ಕುಡಿಯುವ ನೀರನ್ನ ಪೂರೈಸುವ ದೃಷ್ಟಿಯಿಂದ ಜಲಮಂಡಳಿಯ ಶ್ರಮಜೀವಿಗಳು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಕಾವೇರಿ ನೀರು ಸರಬರಾಜು ಆಗುವ ಮಾರ್ಗದಲ್ಲಿ ನಿನ್ನೆ ರಾತ್ರಿ ಅಡಚಣೆ ಉಂಟಾಗಿತ್ತು. ರಾತ್ರೋರಾತ್ರಿ ನಮ್ಮ ಸಿಬ್ಬಂದಿ ವರ್ಗದವರು ಈ ದುರಸ್ತಿ ಕಾರ್ಯವನ್ನು ಕೈಗೊಳ್ಳುವುದರ ಮೂಲಕ ನೀರು ಸರಾಗವಾಗಿ ಹರಿಯಲು ನೆರವಾದರು. ಇದರಿಂದ ಆಗಬಹುದಾಗಿದ್ದ ನೀರಿನ ಅಭಾವವನ್ನು ತಪ್ಪಿಸಿದ್ದಾರೆ. ಇದಕ್ಕೆ ಕಾರಣರಾದ ಜಲಮಂಡಳಿಯ ಶ್ರಮಜೀವಿಗಳಿಗೆ ನಮನ ಸಲ್ಲಿಸಿದರು.

ಕಳೆದ 100 ದಿನಗಳಲ್ಲಿ ನಗರದಲ್ಲಿ ತಲೆದೂರಿರುವ ಜಲಕ್ಷಾಮವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಲಮಂಡಳಿ ಅಧ್ಯಕ್ಷನಾಗಿ ಬಹುತೇಕ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಸ್ಥಳೀಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜನರೊಂದಿಗೆ ಚರ್ಚಿಸಿ ನೀರಿನ ಅಭಾವವನ್ನು ನಿವಾರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿದ್ದೇನೆ. ನಗರದ ಹೊರ ವಲಯದ 110 ಹಳ್ಳಿಗಳಲ್ಲಿ ಕಾವೇರಿ ನೀರಿನ ಸಂಪರ್ಕವಿಲ್ಲ. ಈ ಪ್ರದೇಶಗಳು ಬೋರ್‌ವೆಲ್‌ಗಳನ್ನೇ ಅವಲಂಬಿಸಿವೆ. ಇಂಥ ಕಡೆ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಬಿಡಬ್ಲ್ಯುಎಸ್‌ಎಸ್‌ಬಿ-ಬಿಬಿಎಂಪಿ ಜಂಟಿಯಾಗಿ ನೀರು ಪೂರೈಕೆ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ನಂತರ ಕೆಂಗೇರಿಯ ಗಾಂಧಿನಗರ ಹಾಗೂ ರಾಜರಾಜೇಶ್ವರಿ ನಗರದ ಬಂಗಾರಪ್ಪ ನಗರದ ಸ್ಲಂಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಪರಿಶೀಲಿಸಿದರು. ಅಗತ್ಯವಿದ್ದಲ್ಲಿ ಹೆಚ್ಚುವರಿ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವಂತೆ ರಾಮ್‌ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಲಮಂಡಳಿಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related Stories

No stories found.

Advertisement

X
Kannada Prabha
www.kannadaprabha.com