ಕರ್ನಾಟಕಕ್ಕೆ ನೀಡಬೇಕಿದ್ದ ಪ್ರತಿ ಪೈಸೆಯನ್ನು ಸಮಯಕ್ಕೆ ಸರಿಯಾಗಿ ನೀಡಲಾಗಿದೆ: ಕಾಂಗ್ರೆಸ್ ಹೇಳಿಕೆ ತಿರಸ್ಕರಿಸಿದ ನಿರ್ಮಲಾ ಸೀತಾರಾಮನ್

ಬರ ಪರಿಸ್ಥಿತಿ ನಿಭಾಯಿಸಲು ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸಲು ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್‌ಡಿಆರ್‌ಎಫ್) ಅಡಿಯಲ್ಲಿ ಅನುದಾನವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಚಿಂತಕರ ವೇದಿಕೆ ಆಯೋಜಿಸಿದ್ದ ಅನೌಪಚಾರಿಕ ಸಂವಾದದಲ್ಲಿ ಮಾತನಾಡಿದ ಸೀತಾರಾಮನ್, 'ಕರ್ನಾಟಕಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ ಎಂಬ ಹೇಳಿಕೆ ಸಂಪೂರ್ಣ ಸುಳ್ಳು, ಹಣಕಾಸು ಆಯೋಗವು ತನ್ನ ಅಂತಿಮ ವರದಿಯಲ್ಲಿ ಅಂತಹ ಯಾವುದೇ ವಿಶೇಷ ಅನುದಾನವನ್ನು ಶಿಫಾರಸು ಮಾಡಿಲ್ಲ. ಕರ್ನಾಟಕಕ್ಕೆ ನೀಡಬೇಕಿದ್ದ ಪ್ರತಿ ಪೈಸೆಯನ್ನು ಲೆಕ್ಕ ಹಾಕಲಾಗಿದೆ ಮತ್ತು ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡಲಾಗಿದೆ ಎಂದರು.

'ಪ್ರಧಾನಿ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿಯಲ್ಲಿ, ದೇಶದಾದ್ಯಂತ 80 ಕೋಟಿ ಜನರು ಮತ್ತು ಬೆಂಗಳೂರು ನಗರದ 30.5 ಲಕ್ಷ ಜನರು ಪ್ರತಿ ತಿಂಗಳು ಉಚಿತ ಪಡಿತರವನ್ನು ಪಡೆಯುತ್ತಿದ್ದಾರೆ. ಸಾಮಾನ್ಯ ಜನರಿಗೆ, ವಿಶೇಷವಾಗಿ ಬಡವರಿಗೆ ಸಹಾಯ ಮಾಡಲು ನಾವು ಪೂರೈಸಿರುವ ಭರವಸೆಗಳ ಬಗ್ಗೆ ಹೇಳಲು ನಾನು ಬಯಸುತ್ತೇನೆ. ದೇಶದಾದ್ಯಂತ 52 ಕೋಟಿಗೆ ಹೋಲಿಸಿದರೆ ಬೆಂಗಳೂರು ನಗರದಲ್ಲೇ 14.68 ಲಕ್ಷ ಜನ್-ಧನ್ ಖಾತೆಗಳನ್ನು ತೆರೆಯಲಾಗಿದೆ' ಎಂದು ತಿಳಿಸಿದ್ದಾರೆ.

ನಿರ್ಮಲಾ ಸೀತಾರಾಮನ್
ಕರ್ನಾಟಕ ಕಾಂಗ್ರೆಸ್ ಸರ್ಕಾರ 'ಸುಳ್ಳು ನಿರೂಪಣೆ'ಯನ್ನು ಬಿಂಬಿಸುತ್ತಿದೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನುರಿತ ಕುಶಲಕರ್ಮಿಗಳು 10 ಲಕ್ಷ ರೂ.ವರೆಗಿನ ಕಿರುಸಾಲವನ್ನು ಪಡೆಯಲು ಅನುವು ಮಾಡಿಕೊಡುವ ಕೇಂದ್ರದ ಪ್ರಮುಖ ಮುದ್ರಾ ಯೋಜನೆಯಡಿ ಬೆಂಗಳೂರು ನಗರಕ್ಕೆ 30,490 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

'ಬೆಂಗಳೂರು ನಗರವೊಂದರಲ್ಲೇ 38.25 ಲಕ್ಷ ಮುದ್ರಾ ಯೋಜನೆಯ ಫಲಾನುಭವಿಗಳು ಇದ್ದಾರೆ. ರಾಜ್ಯವು ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರಿಗೆ 10 ಲಕ್ಷದಿಂದ 1 ಕೋಟಿ ರೂಪಾಯಿಗಳ ಸಾಲ ನೀಡುವ 'ಸ್ಟ್ಯಾಂಡ್-ಅಪ್ ಇಂಡಿಯಾ' ಅಡಿಯಲ್ಲಿ ಅನುದಾನವನ್ನು ಪಡೆದುಕೊಂಡಿದೆ. ಬೆಂಗಳೂರು ನಗರದಲ್ಲಿ ಈ ಯೋಜನೆಯಡಿ 467 ಕೋಟಿ ರೂ. ಗಳನ್ನು ವಿತರಿಸಲಾಗಿದೆ. ಈ ನಗರವೊಂದರಲ್ಲೇ ಈ ಯೋಜನೆಯಡಿ 4,429 ನೋಂದಾಯಿತ ಫಲಾನುಭವಿಗಳಿದ್ದಾರೆ. ಹಾಗೆಯೇ ಬೆಂಗಳೂರು ನಗರದ 1.25 ಲಕ್ಷ ಬೀದಿಬದಿ ವ್ಯಾಪಾರಿಗಳು ಪ್ರಧಾನಮಂತ್ರಿಯವರ ಸ್ವನಿಧಿ ಯೋಜನೆ ಅಡಿಯಲ್ಲಿ ಫಲಾನುಭವಿಗಳಾಗಿದ್ದಾರೆ. ಈ ಪೈಕಿ ಶೇ 62 ರಷ್ಟು ಮಹಿಳೆಯರು, ಶೇ 31 ರಷ್ಟು ಒಬಿಸಿ ಮತ್ತು ಶೇ 29 ರಷ್ಟು ಎಸ್‌ಸಿ ಮತ್ತು ಎಸ್‌ಟಿಗಳು ಯೋಜನೆಯ ಲಾಭ ಪಡೆದಿದ್ದಾರೆ. ಪ್ರಧಾನಮಂತ್ರಿ ಜೀವನ್ ಜ್ಯೋತಿ ಬೀಮಾ ಯೋಜನೆಯಡಿ ಬೆಂಗಳೂರು ನಗರ ಪ್ರದೇಶದಲ್ಲಿ 30 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಸೀತಾರಾಮನ್ ಹೇಳಿದರು.

ನಿರ್ಮಲಾ ಸೀತಾರಾಮನ್
ಬರ ಪರಿಹಾರ ನೀಡದ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

2017 ರಿಂದ 22ರ ನಡುವಿನ ಅವಧಿಯಲ್ಲಿ ರಾಜ್ಯದ ಜಿಎಸ್‌ಟಿ ಪಾಲಿನಲ್ಲಿ 1.06 ಕೋಟಿ ರೂ.ಗಳನ್ನು ಕರ್ನಾಟಕಕ್ಕೆ ಸಂಪೂರ್ಣವಾಗಿ ಬಿಡುಗಡೆ ಮಾಡಲಾಗಿದೆ ಮತ್ತು ಮಾರ್ಚ್ 2024 ವರೆಗೆ ಕರ್ನಾಟಕಕ್ಕೆ ಯಾವುದೇ ಜಿಎಸ್‌ಟಿ ಪರಿಹಾರವನ್ನು ಬಾಕಿ ಉಳಿಸಿಕೊಂಡಿಲ್ಲ ಎಂದು ಹೇಳಿದರು.

ಜಿಎಸ್‌ಟಿ ಪೂರ್ವದ ಬೆಳವಣಿಗೆಯ ದರವು ಕೇವಲ ಶೇ 11.68 ರಷ್ಟಿತ್ತು. ಇಂದು ಅದು ಶೇ 15ಕ್ಕೆ ತಲುಪುತ್ತಿರುವುದರಿಂದ, ಅವರು (ಕಾಂಗ್ರೆಸ್) ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಜಿಎಸ್‌ಟಿ ನಿಮಗೆ ಪ್ರಯೋಜನವನ್ನು ಒದಗಿಸುತ್ತಿದೆ ಎಂದು ನಾನು ರಾಜ್ಯ ಸರ್ಕಾರಕ್ಕೆ ಹೇಳಲು ಬಯಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com