ದೇವನಹಳ್ಳಿಯಲ್ಲಿ 2500 ಕೋಟಿ ರೂ. ವೆಚ್ಚದಲ್ಲಿ ಮೆಗಾ ರೈಲ್ವೇ ಟರ್ಮಿನಲ್ ನಿರ್ಮಾಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ಸುಮಾರು 2500 ಕೋಟಿ ರೂ ವೆಚ್ಚದಲ್ಲಿ ಮೆಗಾ ರೈಲ್ವೇ ಟರ್ಮಿನಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.
ದೇವನಹಳ್ಳಿ
ದೇವನಹಳ್ಳಿ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ಸುಮಾರು 2500 ಕೋಟಿ ರೂ ವೆಚ್ಚದಲ್ಲಿ ಮೆಗಾ ರೈಲ್ವೇ ಟರ್ಮಿನಲ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.

ಹೌದು.. ನಗರದ ಇತರ ಪ್ರಮುಖ ರೈಲು ನಿಲ್ದಾಣಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ರೈಲ್ವೆ ವಿಭಾಗವು ನಿರ್ವಹಣಾ ಸೌಲಭ್ಯಗಳೊಂದಿಗೆ ದೇವನಹಳ್ಳಿಯಲ್ಲಿ ದೊಡ್ಡ ಟರ್ಮಿನಲ್ ಅನ್ನು ಯೋಜಿಸುತ್ತಿದೆ. ಇದಕ್ಕೆ ಸುಮಾರು 2,500 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಅದರ ಕಾರ್ಯಸಾಧ್ಯತೆಯ ಅಧ್ಯಯನವು ಬಹುತೇಕ ಪೂರ್ಣಗೊಂಡಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ರೈಲ್ವೇ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ್ದು, 'ಇದನ್ನು ವಿಕಸಿತ ಭಾರತ ಯೋಜನೆಯಡಿಯಲ್ಲಿ ಕಲ್ಪಿಸಲಾಗಿದೆ. ಸುಮಾರು 200 ಎಕರೆಯಲ್ಲಿ ಈ ರೇಲ್ವೇ ಮೆಗಾ ಟರ್ಮಿನಲ್ ನಿರ್ಮಿಸಲು ಮುಂದಾಗಿದ್ದು, ಭೂಮಿ ಲಭ್ಯತೆ ಕುರಿತು ಕೆಲಸ ಮಾಡುತ್ತಿದ್ದೇವೆ. ಇದು ರೈಲುಗಳನ್ನು ಓಡಿಸಲು ಕನಿಷ್ಠ 10 ಪ್ಲಾಟ್‌ಫಾರ್ಮ್‌ಗಳನ್ನು ಹೊಂದಿರುತ್ತದೆ. ಒಮ್ಮೆ ಸ್ಥಳಾಂತರಗೊಂಡರೆ, ಇದು KSR ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

ಅಂತೆಯೇ ನಾವು ಅಸ್ತಿತ್ವದಲ್ಲಿರುವ ದೇವನಹಳ್ಳಿ ನಿಲುಗಡೆ ನಿಲ್ದಾಣದಿಂದ 4 ಅಥವಾ 5 ಕಿಮೀ ದೂರದಲ್ಲಿರುವ ಸ್ಥಳವನ್ನು ಹುಡುಕುತ್ತಿದ್ದೇವೆ. ಈ ಯೋಜನೆಯು ರೈಲ್ವೆ ಮಂಡಳಿಯಿಂದ ಅನುಮೋದನೆ ಪಡೆಯಬೇಕಾಗಿದೆ ಮತ್ತು ನಂತರ ಕೇಂದ್ರ ಸಚಿವ ಸಂಪುಟದ ಅನುಮೋದನೆ ಪಡೆಯಬೇಕಿದೆ ಎಂದು ಅವರು ಹೇಳಿದರು.

ದೇವನಹಳ್ಳಿ
ವಿಶ್ವದರ್ಜೆಯ ನಿಲ್ದಾಣವಾಗಿ ಯಶವಂತಪುರ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ಇದು ನಗರಕ್ಕೆ ಪ್ರಸ್ತಾಪಿಸಲಾದ 287-ಕಿಮೀ ವೃತ್ತಾಕಾರದ ರೈಲ್ವೆ ಯೋಜನೆಯಲ್ಲಿ ಬರಲಿದ್ದು, ಟರ್ಮಿನಲ್ ನಿರ್ಮಾಣ ಯೋಜನೆ ಜಾರಿ ವಿಳಂಬವಾಗುವುದಿಲ್ಲ. ಸ್ವತಂತ್ರವಾಗಿ ನಿರ್ಮಿಸಲಾಗುವುದು. ಸಮೀಪದ ಇತರ ರೈಲು ನಿಲ್ದಾಣಗಳಿಂದ ಬೈಪಾಸ್ ರೈಲು ಮಾರ್ಗಗಳ ಮೂಲಕ ಟರ್ಮಿನಲ್ ಅನ್ನು ಸಂಪರ್ಕಿಸಲು ಯೋಜನೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಕಳೆದ ವರ್ಷ ನವೆಂಬರ್‌ನಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿದ ವೃತ್ತಾಕಾರದ ರೈಲ್ವೆ ಯೋಜನೆಯು ನಿಡವಂಡ, ದೊಡ್ಡಬಳ್ಳಾಪುರ, ದೇವನಹಳ್ಳಿ, ಮಾಲೂರು, ಹೀಲಲಿಗೆ ಮತ್ತು ಸೋಲೂರನ್ನು ಸಂಪರ್ಕಿಸುವ ಮೂಲಕ ನಗರದ ಜನದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ವೃತ್ತವು ನಿಡ್ವಂಡದಲ್ಲಿ ಕೊನೆಗೊಳ್ಳುತ್ತದೆ. "ವೃತ್ತಾಕಾರದ ಯೋಜನೆಯು ಜಾರಿಯಲ್ಲಿರುವಾಗ, ಇಲ್ಲಿಗೆ ರೈಲುಗಳನ್ನು ಸ್ಥಳಾಂತರಿಸುವುದು ತುಂಬಾ ಸುಲಭ. ಪ್ರಸ್ತುತ ಯೋಜನೆಯ ಕಾರ್ಯಸಾಧ್ಯತೆಯ ಅಧ್ಯಯನ ನಡೆಯುತ್ತಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com