ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು; ಮೊದಲ ದಿನವೇ ಇಬ್ಬರು ಶಿಕ್ಷಕರ ಅಮಾನತು

2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಯಾದಗಿರಿ: 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ವಾರ್ಷಿಕ ಪರೀಕ್ಷೆ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು ಮಾಡಲಾಗಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ, ಸುರಪುರ ತಾಲೂಕಿನ ಏವೂರು ಸರ್ಕಾರಿ ಶಾಲೆಯ ಶಿಕ್ಷಕ ಸಾಹೇಬ್​ಗೌಡ ಮತ್ತು ಸುರಪುರ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರಾಗಿದ್ದ ಸುರಪುರ ತಾಲೂಕಿನ ಝಂಡದಕೇರಾ ಸರ್ಕಾರಿ ಶಾಲೆಯ ಶಿಕ್ಷಕ ಹನುಮಂತರಾಯ ಅವರನ್ನು ಅಮಾನತು ಮಾಡಲಾಗಿದೆ.

ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಆರೋಪದ ಮೇಲೆ ಈ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಯಾದಗಿರಿ ಜಿಲ್ಲಾ ಪಂಚಾಯತ್ ಸಿಇಒ ಗರೀಮಾ ಪನ್ವಾರ್ ಅವರು ಆದೇಶ ಹೊರಡಿಸಿದ್ದಾರೆ.

ಸಾಂದರ್ಭಿಕ ಚಿತ್ರ
ತುಮಕೂರು: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವು

ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರೂ ಮೇಲ್ವಿಚಾರಕರು ಕ್ರಮಕೈಗೊಂಡಿರಲಿಲ್ಲ. ಮುಖ್ಯ ಅಧೀಕ್ಷಕರ ಗಮನಕ್ಕೂ ತರದೆ ಪರೀಕ್ಷಾ ಮೇಲ್ವಿಚಾರಕರು ನಿರ್ಲಕ್ಷಿಸಿದ್ದಾರೆ. ಸಿಸಿಕ್ಯಾಮರಾ ದೃಶ್ಯ ಆಧರಿಸಿ ಇಬ್ಬರು ಪರೀಕ್ಷಾ ಮೇಲ್ವಿಚಾರಕರ ಅಮಾನತು ಮಾಡಲಾಗಿದೆ. ಅಲ್ಲದೆ ಒಬ್ಬ ವಿದ್ಯಾರ್ಥಿಯನ್ನು ಸಹ ಡಿಬಾರ್ ಮಾಡಲಾಗಿದೆ.

ಯದಗಿರಿ ಜಿಲ್ಲೆಯ 59 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆದಿದೆ. ಜಿಲ್ಲೆಯಲ್ಲಿ 44 ಸಾಮಾನ್ಯ, 9 ಸೂಕ್ಷ್ಮ ಹಾಗೂ 6 ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 59 ಪರೀಕ್ಷಾ ಕೇಂದ್ರಗಳಲ್ಲಿ 19575 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com