ಬರ ಪರಿಹಾರ: ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಏಕೆ?

ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ಬೆಂಗಳೂರು: ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (NDRF) ಅಡಿಯಲ್ಲಿ ರಾಜ್ಯಕ್ಕೆ 18,171 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಸರ್ಕಾರ ಏಕೆ ಸುಪ್ರೀಂ ಕೋರ್ಟ್ ಗೆ ಹೋಯಿತು?: ಸೆಪ್ಟೆಂಬರ್ ಮತ್ತು ನವೆಂಬರ್ 2023 ರ ನಡುವೆ ಮೂರು ಜ್ಞಾಪಕ ಪತ್ರಗಳೊಂದಿಗೆ ಕೇಂದ್ರವನ್ನು ಸಂಪರ್ಕಿಸಿ, ಡಿಸೆಂಬರ್ 19 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಡಿಸೆಂಬರ್ 20 ರಂದು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರವೂ ಅದರ ಯಾವುದೇ ಪ್ರಯತ್ನಗಳು ಫಲ ನೀಡಲಿಲ್ಲ. ಆಗ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಮಾರ್ಗವನ್ನು ಆರಿಸಿಕೊಂಡರು. ರಾಜ್ಯಕ್ಕೆ ಒಂದು ಪೈಸೆ ಕೂಡ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ರಾಜ್ಯಕ್ಕೆ ತನ್ನ ಬಾಧ್ಯತೆಯಾಗಿರುವ ಹಣಕಾಸಿನ ನೆರವು ನೀಡಲು ಕೇಂದ್ರವು ವಿಫಲವಾದ ಕಾರಣ ನಮ್ಮ ಎಲ್ಲಾ ಆಯ್ಕೆಗಳ ನಂತರ, ನಾವು ರಿಟ್ ಅರ್ಜಿಯೊಂದಿಗೆ ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ನಮ್ಮ ಶಾಸನಬದ್ಧ ಹಕ್ಕನ್ನು ಚಲಾಯಿಸಿದ್ದೇವೆ ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯ ಸರಕಾರ ರಾಜ್ಯದ ಖಜಾನೆಯಿಂದ 650 ಕೋಟಿ ಬಿಡುಗಡೆ ಮಾಡುವ ಮೂಲಕ 33,44,000 ರೈತರಿಗೆ ತಲಾ 2 ಸಾವಿರ ರೂಪಾಯಿ ಮೇವಿಗೆ 450 ಕೋಟಿ ಹಾಗೂ ಕುಡಿಯುವ ನೀರಿಗೆ 870 ಕೋಟಿ ಬಿಡುಗಡೆ ಮಾಡಿದೆ ಎಂದರು.

ರಾಜ್ಯ ಸರ್ಕಾರವು ತನ್ನ ರಿಟ್ ಅರ್ಜಿಯಲ್ಲಿ, NDRF ಹಣವನ್ನು ಬಿಡುಗಡೆ ಮಾಡುವ ಬಗ್ಗೆ ನಿರ್ಧರಿಸಬೇಕಾಗಿರುವುದರಿಂದ ಗೃಹ ವ್ಯವಹಾರಗಳ ಸಚಿವಾಲಯವನ್ನು (MHA) ಪ್ರತಿವಾದಿ ನಂ. 1 ಮಾಡಿತು. ಹಣವನ್ನು ಬಿಡುಗಡೆ ಮಾಡದಿರುವುದು ಸಂವಿಧಾನದ 14 ಮತ್ತು 21 ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿದ ಕರ್ನಾಟಕದ ಜನರ ಮೂಲಭೂತ ಹಕ್ಕುಗಳ 'ಪೂರ್ವಭಾವಿ ಉಲ್ಲಂಘನೆ' ಎಂದು ರಾಜ್ಯವು ಪ್ರತಿಪಾದಿಸಿದೆ.

ವಾಸ್ತವ ಪರಿಸ್ಥಿತಿ ಹೇಗಿದೆ?: ಕರ್ನಾಟಕ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. 48 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ನಷ್ಟವಾಗಿದ್ದು, ಅಂದಾಜು 35,162 ಕೋಟಿ ರೂಪಾಯಿಗಳಾಗಿದೆ. ರಾಜ್ಯ ಸರ್ಕಾರವು ಎನ್‌ಡಿಆರ್‌ಎಫ್ ಅಡಿಯಲ್ಲಿ 18,171.44 ಕೋಟಿ ರೂ. ಸೇರಿದಂತೆ ಬೆಳೆ ನಷ್ಟದ ಇನ್‌ಪುಟ್ ಸಬ್ಸಿಡಿಗೆ 4,663.12 ಕೋಟಿ ರೂ., ಜೀವನೋಪಾಯಕ್ಕೆ ತೊಂದರೆಯಾದ ಕುಟುಂಬಗಳಿಗೆ ಅನಪೇಕ್ಷಿತ ಪರಿಹಾರಕ್ಕಾಗಿ ರೂ. 12,577.9 ಕೋಟಿ, ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು 566.78 ಕೋಟಿ ರೂ. ಕುಡಿಯುವ ನೀರಿನ ಕೊರತೆಯನ್ನು ಪರಿಹರಿಸಲು 363.68 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

ಅಂತರ ಸಚಿವಾಲಯದ ಕೇಂದ್ರೀಯ ತಂಡ (IMCT) ಅಕ್ಟೋಬರ್‌ನಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಖುದ್ದು ಮೌಲ್ಯಮಾಪನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com