ಬಿಟ್ ಕಾಯಿನ್ ಹಗರಣ: ‘ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು’

ಅಧಿಕಾರಿಗಳು ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾಯಿಸಿಕೊಳ್ಳಲು ಡ್ರಗ್ಸ್ ಅನ್ನು ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: 2020 ರ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾಯಿಸಿಕೊಳ್ಳಲು ಅಲ್ಪ್ರಜೋಲಮ್(ಕ್ಸಾನಾಸ್ - ಸೈಕೋಟ್ರೋಪಿಕ್ ವಸ್ತು) ಡ್ರಗ್ಸ್ ಅನ್ನು ನೀಡಿದ್ದಾರೆ.

ಆರೋಪಿ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷ್ಮೀಕಾಂತಯ್ಯ ಜಿ ಅವರು ನಗರದ ನ್ಯಾಯಾಲಯಕ್ಕೆ ಸಲ್ಲಿಸಿದ ಜಾಮೀನು ಅರ್ಜಿಗೆ ಸಲ್ಲಿಸಿದ ಆಕ್ಷೇಪಣೆಗಳಲ್ಲಿ ಇದು ಬಹಿರಂಗವಾಗಿದೆ.

ಸೂಕ್ತ ವೈದ್ಯಕೀಯ ಸೇವೆ ನೀಡದೆ ಹಾಗೂ ಪ್ರಕರಣದ ಇತರ ಆರೋಪಿಗಳೊಂದಿಗೆ ಶಾಮೀಲಾಗಿ ಶ್ರೀಕಿಗೆ ಔಷಧ ನೀಡಲಾಗಿತ್ತು ಎನ್ನಲಾಗಿದೆ. ಆರೋಪಿ ಪೊಲೀಸ್ ಅಧಿಕಾರಿಗಳು ಜಿಸಿಐಡಿ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಕೆಎ ಸಂತೋಷ್ ಕುಮಾರ್ ಅವರ ಸಹಾಯದಿಂದ ಶ್ರೀಕಿಗೆ ಒತ್ತಡ ಹಾಕಿ ಕೆಲವು ಹಣಕಾಸು ಸಂಸ್ಥೆಗಳ ವೆಬ್‌ಸೈಟ್‌ಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರು ಎಂದು ಹೇಳಲಾಗಿದೆ.

ಸಾಂದರ್ಭಿಕ ಚಿತ್ರ
ಬಿಟ್‌ಕಾಯಿನ್ ಹಗರಣ: ಎಸ್ಐಟಿಯಿಂದ ಪೊಲೀಸ್ ಇನ್ಸ್ ಪೆಕ್ಟರ್, ಸೈಬರ್ ಎಕ್ಸ್ ಪರ್ಟ್ ಬಂಧನ

ಅರ್ಜಿದಾರರು ಮತ್ತು ಹಗರಣದ ತನಿಖೆ ನಡೆಸುತ್ತಿರುವ ಇತರ ಪೊಲೀಸ್ ಅಧಿಕಾರಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು, ಆರ್ಥಿಕ ಲಾಭ ಪಡೆದಿದ್ದಾರೆ ಮತ್ತು ಇತರರಿಗೆ ಆರ್ಥಿಕ ನಷ್ಟವನ್ನುಂಟುಮಾಡಲು ಪ್ರಯತ್ನಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌ಪಿಪಿ) ಬಿಎನ್ ಜಗದೀಶ್ ಅವರು ಹೇಳಿದ್ದಾರೆ.

ಆರೋಪಿ ರಾಬಿನ್ ಖಂಡೇಲ್ವಾಲ್‌ನಿಂದ ವಶಪಡಿಸಿಕೊಂಡ ಮೊಬೈಲ್ ಫೋನ್ ನ್ಯಾಯಾಲಯದ ಆಸ್ತಿಯಾಗಿದೆ. ಆದರೆ ಅವರು ಅದನ್ನು ಜಿಸಿಐಡಿ ಎಂಬ ಖಾಸಗಿ ಪ್ರಯೋಗಾಲಯಕ್ಕೆ ಕೊಂಡೊಯ್ದು, ಅಲ್ಲಿ ಅದನ್ನು ಗಮನಿಸದೆ ಬಿಡಲಾಯಿತು ಮತ್ತು ನಂತರ ಸುಮಾರು ಎರಡು ವರ್ಷಗಳ ಕಾಲ ಹಲವಾರು ನಾಗರಿಕರು ಅದನ್ನು ಬಳಸಿದರು. ವಿಶೇಷ ತನಿಖಾ ತಂಡದ(ಎಸ್‌ಐಟಿ) ಒತ್ತಾಯದ ಮೇರೆಗೆ, ಮೊಬೈಲ್ ಫೋನ್ ಹಸ್ತಾಂತರಿಸುವ ಮೊದಲು ಸತ್ಯವನ್ನು ಮರೆಮಾಚಲು ಉದ್ದೇಶಪೂರ್ವಕವಾಗಿ ಅದನ್ನು ಹಾನಿಗೊಳಿಸಲಾಗಿದೆ ಎಂದು ಎಸ್‌ಪಿಪಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

‘ತನಿಖಾಧಿಕಾರಿಗಳು ಆರೋಪಿಗಳನ್ನು ಅಕ್ರಮ ಬಂಧನದಲ್ಲಿಟ್ಟಿದ್ದಾರೆ’

ಎಸ್‌ಐಟಿ ಮತ್ತು ಸಿಐಡಿಯನ್ನು ಪ್ರತಿನಿಧಿಸುವ ಎಸ್‌ಪಿಪಿ, ಅರ್ಜಿದಾರರು ಮತ್ತು ಇತರ ತನಿಖಾ ಅಧಿಕಾರಿಗಳು 2020 ರಲ್ಲಿ ಶ್ರೀಕಿ ಮತ್ತು ರಾಬಿನ್‌ರನ್ನು ಅಕ್ರಮ ಬಂಧನದಲ್ಲಿ ಇರಿಸಿದ್ದಾರೆ ಮತ್ತು ರಾಬಿನ್‌ನ ಕ್ರಿಪ್ಟೋ ವ್ಯಾಲೆಟ್, ಇಮೇಲ್ ಮತ್ತು ಬ್ಯಾಂಕ್ ಖಾತೆಗಳನ್ನು ನಿಯಂತ್ರಿಸಲು ಸಂತೋಷ್‌ಗೆ ಅವಕಾಶ ಮಾಡಿಕೊಟ್ಟರು. ಅವರು ಪಾಸ್ವರ್ಡ್ ಅನ್ನು ಬದಲಾಯಿಸಿದರು. ವೈಯಕ್ತಿಕ ಪ್ರವೇಶದ ಸಂಪೂರ್ಣ ನಿಯಂತ್ರಣವನ್ನು ಪಡೆದರು ಮತ್ತು ರಾಬಿನ್ ಖಾತೆಯಿಂದ ಸಂತೋಷ್ ಅವರ ವೈಯಕ್ತಿಕ ವ್ಯಾಲೆಟ್ಗೆ ಕ್ರಿಪ್ಟೋಕರೆನ್ಸಿಗಳನ್ನು ವರ್ಗಾಯಿಸಿದರು ಎಂದು ಎಸ್ ಪಿಪಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com