ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ಐದು ದಿನ ಉಷ್ಣ ಅಲೆ: IMD ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆಯ ಎಚ್ಚರಿಕೆಯನ್ನು ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆಯ ಎಚ್ಚರಿಕೆಯನ್ನು ನೀಡಿದೆ.

ಉತ್ತರ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗಬಹುದು. ಆದರೆ ಉತ್ತರ-ಆಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಅವು 4 ರಿಂದ 5 ಡಿಗ್ರಿ ಸೆಲ್ಸಿಯಸ್‌ಗಳಷ್ಟು ಹೆಚ್ಚಾಗುತ್ತವೆ ಎಂದು IMD ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗುವ ಮುನ್ಸೂಚನೆಯನ್ನು ಅಧಿಕಾರಿಗಳು ನೀಡಿದ್ದಾರೆ. ಜನರು ಹಗಲು ಹೊತ್ತಿನಲ್ಲಿ ಸಾಧ್ಯವಾದಷ್ಟು ಮನೆಯೊಳಗೆ ಇರುವಂತೆ ಅವರು ಎಚ್ಚರಿಕೆ ನೀಡಿದ್ದಾರೆ. ಜನರು ಮನೆಯಿಂದ ಹೊರಗೆ ಕಾಲಿಟ್ಟಾಗಲೆಲ್ಲಾ ನೀರು ಅಥವಾ ದ್ರವ ಪದಾರ್ಥಗಳನ್ನು ಒಯ್ಯುವಂತೆ ಸಲಹೆ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ
ಹವಾಮಾನ ಬದಲಾವಣೆ: ಜಗತ್ತಿಗೆ ರೆಡ್ ಅಲರ್ಟ್! 10 ವರ್ಷಗಳಿಂದ ಭೂಮಿಯು ಕಾದ ಕುಲುಮೆಯಂತಾಗಿದೆ; ವಿಶ್ವಸಂಸ್ಥೆ ಎಚ್ಚರಿಕೆ

ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಕಲಬುರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ ಎಂದು ಐಎಂಡಿ ವಿಜ್ಞಾನಿ ಎ ಪ್ರಸಾದ್ TNIEಗೆ ತಿಳಿಸಿದ್ದಾರೆ. IMD ವರದಿ ಪ್ರಕಾರ, ತುಮಕೂರು, ಬಾಗಲಕೋಟೆ ಮತ್ತು ಚಿತ್ರದುರ್ಗದ ಕೆಲವು ಭಾಗಗಳಲ್ಲಿ ತಾಪಮಾನವು 3.1- 5 ಡಿಗ್ರಿ ಸೆಲ್ಸಿಯಸ್ ಮತ್ತು ಮಂಡ್ಯ, ದಾವಣಗೆರೆ, ಬಳ್ಳಾರಿ ಮತ್ತು ಕೊಪ್ಪಳದಲ್ಲಿ 1.6- 6 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ಏಪ್ರಿಲ್‌ನಲ್ಲಿ ತಾಪಮಾನವು ಮಾರ್ಚ್‌ಗಿಂತ ಹೆಚ್ಚಾಗಿರುತ್ತದೆ.

ಆದಾಗ್ಯೂ, ರಾಜ್ಯದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತಾಪಮಾನವು 1.2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದೆ. ನಿನ್ನೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಈಗ, ಆಕಾಶವು ಶುಭ್ರವಾಗಿದ್ದು, ಬೇಸಿಗೆಯ ಬಿಸಿಯು ತೀವ್ರಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com