ಬೀದರ್: ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ; ನೀರು ಕುಡಿದ ಜನರು ದಿಗ್ಭ್ರಮೆ!

ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ.
ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ
ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ

ಬೀದರ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿರುವ ಘಟನೆ ಬೀದರ್ ನಲ್ಲಿ ವರದಿಯಾಗಿದೆ.

ಬೀದರ್‌ನ ಆಣದೂರ ಗ್ರಾಮದಲ್ಲಿ ಈ ಘಟನೆ (Bidar News) ನಡೆದಿದ್ದು, ಕುಡಿಯುವ ನೀರಿನ ಓವರ್ ಹೆಡ್ ವಾಟರ್ ಟ್ಯಾಂಕ್‌ನಲ್ಲಿ (Water Tank) ಶವವೊಂದು (Dead Body Found) ಪತ್ತೆಯಾಗಿದೆ. ಇದೇ ಟ್ಯಾಂಕ್ ನ ನೀರನ್ನು ಗ್ರಾಮಸ್ಥರು ಕುಡಿದಿದ್ದು, ಇದೀಗ ಘಟನೆ ಬೆಳಕಿಗೆ ಬಂದ ಬಳಿಕ ಗ್ರಾಮಸ್ಥರು ದಿಗ್ಭ್ರಮೆಗೊಂಡಿದ್ದಾರೆ.

ನೀರಿನ ಟ್ಯಾಂಕ್ ನಲ್ಲಿ ಶವ ಪತ್ತೆ
ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; ಇಬ್ಬರ ಸಾವು, ಎಂಟು ಮಂದಿ ಅಸ್ವಸ್ಥ!

ನೀರಿನ ವಾಸನೆಯಿಂದ ಘಟನೆ ಬೆಳಕಿಗೆ

ಗ್ರಾಮದ ಮನೆ ಮನೆಗೆ ಸರಬರಾಜು ಮಾಡುತ್ತಿದ್ದ ನೀರು ಗಬ್ಬು ನಾರುತ್ತಿತ್ತು. ಈ ಬಗ್ಗೆ ಗ್ರಾಮಸ್ಥರು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಮೊದಮೊದಲು ಕುಡಿಯುವ ನೀರಿಗೆ ಚರಂಡಿ ನೀರು ಏನಾದರೂ ಮಿಶ್ರಣ ಎಂದು ಶಂಕಿಸಲಾಗಿತ್ತು. ಮನೆಗೆ ಸರಬರಾಜು ಆಗುತ್ತಿದ್ದ ನೀರಲ್ಲಿ ಕೂದಲು ಬರುತ್ತಿದ್ದವು. ಇತ್ತ ದೂರು ಬಂದ ಕಾರಣಕ್ಕೆ ವಾಟರ್ ಟ್ಯಾಂಕ್ ಪರಿಶೀಲನೆ ಮಾಡಲು ಅಧಿಕಾರಿಗಳು ಮುಂದಾಗಿದ್ದರು. ಈ ವೇಳೆ ಟ್ಯಾಂಕ್‌ನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ.

ನೀರಿನ ಟ್ಯಾಂಕ್‌ನಲ್ಲಿ ಎಷ್ಟು ದಿವಸದಿಂದ ಶವವಿದೆ? ಇದು ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದು ಬಂದಿಲ್ಲ. ಗ್ರಾಮಸ್ಥರು ಹಲವು ದಿನದಿಂದ ಶವ ಬಿದ್ದಿದ್ದ ಟ್ಯಾಂಕಿನ ನೀರನ್ನೇ ಕುಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com