ಹೊನ್ನಾವರ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರ ದುರ್ಮರಣ, 50 ಜನರಿಗೆ ಗಾಯ

ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.
ಬಸ್ ಅಪಘಾತ
ಬಸ್ ಅಪಘಾತ
Updated on

ಉತ್ತರ ಕನ್ನಡ: ಹೊನ್ನಾವರದ ಸುಳೆಮುರ್ಕಿ ತಿರುವಿನಲ್ಲಿ ಖಾಸಗಿ ಬಸ್​ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತರನ್ನು ತುಮಕೂರು ಮೂಲದ 26 ವರ್ಷದ ಲೋಕೇಶ್ ಮತ್ತು ಚಿಕ್ಕಬಳ್ಳಾಪುರದ 38 ವರ್ಷದ ರುದ್ರೇಶ್ ಎಂದು ಗುರುತಿಸಲಾಗಿದೆ. ಇನ್ನುಳಿದಂತೆ 49 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಹಾಗೂ ಹೊನ್ನಾವರ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಖಾಸಗಿ ಬಸ್ ನಲ್ಲಿ 53 ಮಂದಿ ತಂಡ ಗೌರಿ ಬಿದನೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕನ ಅತೀ ವೇಗದ ಕಾರಣ ಬಸ್ ಸುಳೆಮುರ್ಕಿ ತಿರುವಿನಲ್ಲಿ ಪಲ್ಟಿಯಾಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಸ್ ಅಪಘಾತ
Haveri: ಪ್ರೀತಿಸಿದ ಯುವತಿಯೊಂದಿಗೆ ಯುವಕ ಪರಾರಿ: ಕಂಬಕ್ಕೆ ತಾಯಿ ಕಟ್ಟಿಹಾಕಿ ಥಳಿತ, ಪ್ರಕರಣ ದಾಖಲು!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com