ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ‌ ಕುಸಿದು ಕಲಾವಿದ ಸಾವು!

ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.
ಮೃತ ಕಲಾವಿದ ಮುನಿಕೆಂಪಣ್ಣ
ಮೃತ ಕಲಾವಿದ ಮುನಿಕೆಂಪಣ್ಣ
Updated on

ಬೆಂಗಳೂರು: ನಾಟಕದಲ್ಲಿ ಅಭಿನಯಿಸುತ್ತಲೇ ವೇದಿಕೆ ಮೇಲೆ ಕುಸಿದು ಕಲಾವಿದರೊಬ್ಬರು ಸಾವನ್ನಪ್ಪಿರುವ ಘಟನೆ ನಗರದಲ್ಲಿ ಶುಕ್ರವಾರ ನಡೆದಿದೆ.

ದೇವನಹಳ್ಳಿ ತಾಲೂಕು ಅರದೇಶಹಳ್ಳಿಯ ನಿವಾಸಿಯಾದ ಎನ್. ಮುನಿಕೆಂಪಣ್ಣ ಮೃತ ಕಲಾವಿದ. ಶುಕ್ರವಾರ ರಾತ್ರಿ ಯಲಹಂಕ ತಾಲೂಕಿನ ಸಾತನೂರು ಬಳಿ ಕುರುಕ್ಷೇತ್ರ ನಾಟಕ ಪ್ರದರ್ಶನ ನಡೆಯುತ್ತಿತ್ತು. ಈ ವೇಳೆ, ನಾಟಕದಲ್ಲಿ ಶಕುನಿಯ ಪಾತ್ರ ನಿರ್ವಹಿಸುತ್ತಿದ್ದ ಮುನಿಕೆಂಪಣ್ಣ ರಾತ್ರಿ 1.30ರ ಸುಮಾರಿಗೆ ಪಾತ್ರದಲ್ಲಿ ಅಭಿನಯಿಸುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಾವಿಗೂ ಮುನ್ನ ಮುನಿಕೆಂಪಣ್ಣ ಅವರು ವೇದಿಕೆಯಲ್ಲಿ ಡೈಲಾಗ್ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮೃತ ಕಲಾವಿದ ಮುನಿಕೆಂಪಣ್ಣ
ಬಂಟ್ವಾಳ: ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕಲಾಲ್ ಸಾವು

ಮೃತ ಮುನಿಕೆಂಪಣ್ಣ ಅವರು ನಿವೃತ್ತ ಉಪನ್ಯಾಸಕರು, ಸಾಹಿತಿ, ಕಲಾವಿದರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ದೇವನಹಳ್ಳಿಯ 28ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಇಂದು ಮಧ್ಯಾಹ್ನ ಮೂರು ಗಂಟೆಗೆ ಮುನಿಕೆಂಪಣ್ಣ ಅವರ ಹುಟ್ಟೂರಾದ ಅರದೇಶಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com