ತಾಪಮಾನ ಹೆಚ್ಚಳ: ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಇದ್ದು, ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಮುಂದಿನ ಐದು ದಿನ ರೆಡ್ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರ್ಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

ಕಲಬುರಗಿ ಜಿಲ್ಲೆಯಲ್ಲಿ ಕಳೆದ 4 ದಿನದಿಂದ ಉಷ್ಣ ಅಲೆಗಳು ರಾಚುತ್ತಿವೆ. ಮಧ್ಯಾಹ್ನ 12 ರಿಂದ ಸಂಜೆ 3 ಟೆಯವರೆಗೂ ಹೊರಗಡೆ ಹೋಗದೆ ನೆರಳಲ್ಲಿ ಇರುವಂತೆ. ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಸಂರಕ್ಷಣಾ ಸಲಹೆಗಳನ್ನು ಪಾಲಿಸಬೇಕು ಎಂದು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜಿಲ್ಲೆಯ ಜನತೆಗೆ ಮನವಿ ಮಾಡಿದೆ.

ಸಂಗ್ರಹ ಚಿತ್ರ
ರಾಜ್ಯದಲ್ಲಿ ತಾಪಮಾನ ಹೆಚ್ಚಳ: ವಿದ್ಯುತ್ ಬಳಕೆ ಗಣನೀಯ ಏರಿಕೆ!

ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ಪ್ರಮಾಣದಲ್ಲಿ ಆಗಾಗ್ಗೆ ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಒಳಾಂಗಣದಲ್ಲೇ ಇರಬೇಕು, ವಿಶೇಷವಾಗಿ ಮಕ್ಕಳು, ಹಿರಿಯರು, ಮಧುಮೇಹ ಹಾಗೂ ಬಿಪಿ ಇರುವವರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕೋರಿದೆ.

ಇನ್ನು ಕಲ್ಯಾಣ ಕರ್ನಾಟಕಲ್ಲಿ ಬಿಸಿಲಿನ ಪ್ರತಾಪ ಜನರ ಬದುಕು ಹೈರಾಣಾಗಿಸಿದ್ದು, ಬಿಸಿಲು ಎಷ್ಟಿದೆ ಎನ್ನುವುದನ್ನು ತೋರಿಸಲು ಇಲ್ಲಿನ ಜನ ಬೆಂಕಿ ಹಚ್ಚದೆಯೇ ಕಬ್ಬಿಣದ ಕಡಾಯಿಯ ಮೇಲೆ ಮೊಟ್ಟೆಯ ಆಯ್ಲೆಟ್ ಮಾಡಿದ ಫೋಟೋ, ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com