ರೈಲ್ವೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಮಸ್ಯೆಗಳನ್ನು ಪರಿಹರಿಸಲು ಸಭೆ; ಯೋಜನೆ ಪೂರ್ಣಗೊಳಿಸಲು ಆದ್ಯತೆ

ರೈಲ್ವೆ ಯೋಜನೆಗಳನ್ನು ತ್ವರಿತಗೊಳಿಸಲು ಮತ್ತು ಭೂಸ್ವಾಧೀನ ಪ್ರಕ್ರಿಯೆಗಳನ್ನು ಸುಗಮಗೊಳಿಸಲು, ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರೊಂದಿಗೆ ಸಮನ್ವಯ ಸಭೆಯಲ್ಲಿ ಭಾಗವಹಿಸಿದರು.
ಭಾರತೀಯ ರೈಲ್ವೆ
ಭಾರತೀಯ ರೈಲ್ವೆ
Updated on

ಬೆಂಗಳೂರು: ರೈಲ್ವೆ ಯೋಜನೆಗಳನ್ನು ತ್ವರಿತಗೊಳಿಸಲು ಮತ್ತು ಭೂಸ್ವಾಧೀನ ಪ್ರಕ್ರಿಯೆಗಳನ್ನು ಸುಗಮಗೊಳಿಸಲು, ನೈಋತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ ಅವರು ಕರ್ನಾಟಕದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರೊಂದಿಗೆ ಸಮನ್ವಯ ಸಭೆಯಲ್ಲಿ ಭಾಗವಹಿಸಿದರು.

ರೈಲ್ವೆಯ ಭೂಮಿ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯ ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸಲು ಸಭೆಯು ಗಮನಹರಿಸಿತು.

ಸದ್ಯ ಚಾಲ್ತಿಯಲ್ಲಿರುವ ವಿವಿದ ಹೊಸ ಕಲ್ಯಾಣದುರ್ಗ ಮೂಲಕ ರಾಯದುರ್ಗ- ತುಮಕೂರು, ತುಮಕೂರು - ಚಿತ್ರದುರ್ಗ - ದಾವಣಗೆರೆ, ಮುನಿರಾಬಾದ್ (ಗಿಣಿಗೇರಾ) - ರಾಯಚೂರು, ಶಿವಮೊಗ್ಗ - ಶಿಕಾರಿಪುರ- ರಾಣೆಬೆನ್ನೂರು, ಬೆಳಗಾವಿ - ಧಾರವಾಡ, ಹಾಸನ- ಬೇಲೂರು ಮಾರ್ಗದ ಯೋಜನೆಗಳಿಗೆ ಭೂ ಸ್ವಾಧೀನಕ್ಕೆ ಸಂಬಂಧಿಸಿದ ಸವಾಲುಗಳು ಮತ್ತು ಪ್ರಗತಿಯ ಬಗ್ಗೆ ಚರ್ಚಿಸುವುದು ಸಭೆಯ ಪ್ರಾಥಮಿಕ ಅಜೆಂಡಾಗಳಲ್ಲಿ ಒಂದಾಗಿತ್ತು.

ಭಾರತೀಯ ರೈಲ್ವೆ
ರೈಲ್ವೆ ನಿಲ್ದಾಣಗಳಲ್ಲಿ ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ಕೈಗೆಟಕುವ ದರದಲ್ಲಿ ಊಟದ ವ್ಯವಸ್ಥೆ!

ಈ ಪ್ರಮುಖ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗಳನ್ನು ಸಮಯೋಚಿತವಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ತ್ವರಿತವಾಗಿ ಭೂ ಸ್ವಾಧೀನಪಡಿಸಿಕೊಳ್ಳುವ ಪ್ರಾಮುಖ್ಯತೆಯನ್ನು ಅರವಿಂದ ಶ್ರೀವಾಸ್ತವ ಒತ್ತಿಹೇಳಿದರು ಎಂದು ನೈಋತ್ಯ ರೈಲ್ವೆಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಚರ್ಚೆಯ ಸಂದರ್ಭದಲ್ಲಿ, ರಾಜ್ಯದಾದ್ಯಂತ ನಡೆಯುತ್ತಿರುವ ಹೊಸ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆಯ ಸ್ಥಿತಿಯನ್ನು ಪರಿಶೀಲಿಸಲಾಯಿತು. ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಎದುರಾಗಿರುವ ಅಡಚಣೆಗಳನ್ನು ಗುರುತಿಸಲು ಮತ್ತು ಕಾರ್ಯತಂತ್ರಗಳನ್ನು ರೂಪಿಸಲು ಅವಕಾಶವನ್ನು ಒದಗಿಸಲಾಯಿತು. ರಾಜ್ಯದಾದ್ಯಂತ ರೈಲ್ವೆ ಯೋಜನೆಗಳ ಸುಗಮ ಪ್ರಗತಿಯನ್ನು ಖಚಿತಪಡಿಸಿಕೊಳ್ಳಲು ವಿವಿಧ ಮಧ್ಯಸ್ಥಗಾರರ ನಡುವೆ ತಡೆರಹಿತ ಸಮನ್ವಯದ ಮಹತ್ವವನ್ನು ಅವರು ಒತ್ತಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com