ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜೂನ್'ನಿಂದ ಅರ್ಜಿ ಆಹ್ವಾನಕ್ಕೆ ಸರ್ಕಾರ ನಿರ್ಧಾರ?

ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್‌ ಕಾರ್ಡ್‌ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕಳೆದ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಎಪಿಎಲ್‌ ಕಾರ್ಡ್‌ ವಿತರಣೆಗೆ ಮರುಚಾಲನೆ ನೀಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ.

ಜೂನ್‌ ತಿಂಗಳಲ್ಲಿ ಹೊಸ ಕಾರ್ಡ್‌ಗಳಿಗೆ ಅರ್ಜಿ ಆಹ್ವಾನಿಸಲು ಇಲಾಖೆ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಹೊಸ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆಯ ವೆಬ್‌ ಪೋರ್ಟಲ್‌ ಅನ್ನು ಸುಮಾರು ಒಂದೂವರೆ ವರ್ಷದಿಂದಲೂ ಸ್ಥಗಿತಗೊಳಿಸಲಾಗಿತ್ತು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಜೂನ್‌ ಮೊದಲ ವಾರದಲ್ಲಿ ವೆಬ್‌ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅನುವು ಮಾಡಿಕೊಡಲಾಗುವುದು ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿಗಳು ತಿಳಿಸಿವೆ.

ಸಂಗ್ರಹ ಚಿತ್ರ
ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ಕಳೆದ ವರ್ಷ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಿಗದಿಯಾಗಿತ್ತು. ಅದಕ್ಕೂ ಮೊದಲು ಚುನಾವಣಾ ತಯಾರಿಗಳನ್ನು ನಡೆಸಲಾಗುತ್ತಿತ್ತು. ಜೊತೆಗೆ ಆಗ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ಅವಧಿಯೂ ಮುಗಿದಿತ್ತು. ಹೀಗಾಗಿ, ಸುಮಾರು ಒಂದೂವರೆ ವರ್ಷದಿಂದಲೂ ಎಪಿಎಲ್‌ ಕಾರ್ಡ್‌ಗೆ ಅರ್ಜಿಗಳನ್ನು ಸಲ್ಲಿಸಲು ಆನ್‌ಲೈನ್‌ ಪೋರ್ಟಲ್‌ನಲ್ಲಿ ಅವಕಾಶ ಕಲ್ಪಿಸಿರಲಿಲ್ಲ.

ಹೊಸದಾಗಿ ರಚನೆಯಾದ ಕಾಂಗ್ರೆಸ್‌ ಸರ್ಕಾರವು ಗೃಹಲಕ್ಷ್ಮಿ, ಗೃಹಜ್ಯೋತಿ ಮತ್ತಿತರ ಯೋಜನೆಗಳನ್ನು ಜಾರಿಗೆ ತಂದಿತು. ಇವುಗಳ ಲಾಭ ಪಡೆಯಲು ಲಕ್ಷಾಂತರ ಜನ ಅರ್ಜಿ ಸಲ್ಲಿಸಲು ಕಾಯುತ್ತಿದ್ದರು. ಆದರೆ, ಯೋಜನೆಗೆ ಹೆಚ್ಚಿನ ಅರ್ಜಿಗಳು ಬಂದೇ ಬರುತ್ತವೆ ಎಂದು ಅರಿತ ಸರ್ಕಾರ, ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿರಲಿಲಲ. ಹೀಗಾಗಿ, ಅಂದಿನಿಂದಲೂ ಲಕ್ಷಾಂತರ ಮಂದಿ ಅರ್ಹರು ಕಾರ್ಡ್‌ಗಾಗಿ ಚಾತಕಪಕ್ಷಿಗಳಂತೆ ಕಾಯುತ್ತಿದ್ದಾರೆ.

ಲೋಕಸಭಾ ಚುನಾವಣೆಯ ಫಲಿತಾಂಶ ಜೂನ್‌ 4 ಕ್ಕೆ ಇದೆ. ಜೂನ್‌ 5ಕ್ಕೆ ಚುನಾವಣಾ ಎಲ್ಲಾ ನಿರ್ಬಂಧಗಳು ತೆರವಾಗಲಿವೆ. ಆ ಬಳಿಕ ಕರ್ನಾಟಕದಲ್ಲಿ ಪಡಿತರ ಚೀಟಿ ಹಂಚಿಕೆ ಕಾರ್ಯ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com