ಅಶ್ಲೀಲ ವಿಡಿಯೋ ಪ್ರಕರಣ: ಭವಾನಿ ರೇವಣ್ಣ ಭೇಟಿ ಮಾಡಿ ಆತ್ಮಸ್ಥೈರ್ಯ ತುಂಬಿದ ಜೆಡಿಎಸ್ ನಾಯಕರು

ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಅವರಿಗೆ ಸೋಮವಾರ ಜೆಡಿಎಸ್ ನಾಯಕರು ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಜೆಡಿಎಸ್ ನಾಯಕರಿಂದ ಭವಾನಿ ರೇವಣ್ಣ ಭೇಟಿ
ಜೆಡಿಎಸ್ ನಾಯಕರಿಂದ ಭವಾನಿ ರೇವಣ್ಣ ಭೇಟಿ
Updated on

ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣನವರ ಬಂಧನ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಿಂದ ವಿದೇಶಕ್ಕೆ ಹಾರಿ ಹೋಗಿರುವ ಪ್ರಜ್ವಲ್ ರೇವಣ್ಣ ಅವರಿಂದ ತೀವ್ರ ನೋವಿನಲ್ಲಿ ಇರುವ ಭವಾನಿ ರೇವಣ್ಣ ಅವರಿಗೆ ಸೋಮವಾರ ಜೆಡಿಎಸ್ ನಾಯಕರು ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಶ್ರವಣಬೆಳಗೊಳದ ಶಾಸಕ ಸಿ.ಎನ್.ಬಾಲಕೃಷ್ಣ, ಮಾಜಿ ಶಾಸಕ ಕೆ.ಎಸ್.ಲಿಂಗೇಶ್ ಸೇರಿದಂತೆ ಪಕ್ಷದ ಹಿರಿಯ ಕಾರ್ಯಕರ್ತರು ಸೋಮವಾರ ಭವಾನಿ ರೇವಣ್ಣ ಅವರನ್ನು ಹೊಳೆನರಸೀಪುರದ ನಿವಾಸದಲ್ಲಿ ಭೇಟಿ ಮಾಡಿದರು.

ಮಹಿಳೆಯೊಬ್ಬರನ್ನು ಅಪಹರಿಸಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿರುವ ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ನಾಯಕರು ಚರ್ಚೆ ನಡೆಸಿದರು.

ಜೆಡಿಎಸ್ ನಾಯಕರಿಂದ ಭವಾನಿ ರೇವಣ್ಣ ಭೇಟಿ
ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಬಂಧನ ಬೆನ್ನಲ್ಲೇ ಭವಾನಿ ರೇವಣ್ಣಗೂ ಕಾನೂನು ಸಂಕಷ್ಟ ಶುರು!

ಪಕ್ಷದ ಹಿತದೃಷ್ಟಿಯಿಂದ ಜೆಡಿಎಸ್ ನಾಯಕರ ಮುಂದಿನ ನಡೆ ಬಗ್ಗೆಯೂ ಚಿಂತನೆ ನಡೆಸಿದ್ದಾರೆ. ಭಾನುವಾರ ಹಾಸನದಲ್ಲಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು ಕೂಡಿ ಧರಣಿ ನಡೆಸುವ ಮೂಲಕ ರೇವಣ್ಣ ಬಂಧನವನ್ನು ತೀವ್ರವಾಗಿ ಖಂಡಿಸಿದರು. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಾಲಕೃಷ್ಣ, ಎಸ್‌ಐಟಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ರೇವಣ್ಣ ಅವರು ಯಾವುದೇ ವಿಚಾರದಲ್ಲಿ ಭಾಗಿಯಾಗಿಲ್ಲವಾದ್ದರಿಂದ ಅವರನ್ನು ಬಿಡುಗಡೆ ಮಾಡಬೇಕು ಎಂದರು.

ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಪ್ರಕರಣ, ವೀಡಿಯೋದಲ್ಲಿರುವ ಸಂತ್ರಸ್ಥ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ಬಂಧನ ವಿಚಾರದಿಂದ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಅವರು ಆಘಾತಕ್ಕೆ ಒಳಗಾಗಿದ್ದಾರೆ. ಅಲ್ಲದೆ ಈ ಪ್ರಕರಣ ಹೊರ ಬರುತ್ತಿದ್ದಂತೆ ಭವಾನಿ ರೇವಣ್ಣ ಅವರು ಎಲ್ಲೂ ಹೋಗದೆ ಮನೆಯಲ್ಲೇ ಇದ್ದಾರೆ. ಹೀಗಾಗಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಜೆಡಿಎಸ್ ನಾಯಕರು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com