ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಕಾರ್ತಿಕೇಯನ್ ಹತ್ಯೆ

ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ರೌಡಿಶೀಟರ್​ ಕಾರ್ತಿಕೇಯನ್(40) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಕಾರ್ತಿಕೇಯನ್
ಕಾರ್ತಿಕೇಯನ್
Updated on

ಬೆಂಗಳೂರು: ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ರೌಡಿಶೀಟರ್​ ಕಾರ್ತಿಕೇಯನ್(40) ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ದುಷ್ಕರ್ಮಿಗಳು ಇಂದು ಸಂಜೆ ನಡುರಸ್ತೆಯಲ್ಲೇ ಅಟ್ಟಾಡಿಸಿ ಕಾರ್ತಿಕೇಯನ್​ನನ್ನು ಹತ್ಯೆಗೈದು ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾರ್ತಿಕೇಯನ್
ಬೆಂಗಳೂರು: ಸಂಜಯನಗರದಲ್ಲಿ ಹಳೆ ವೈಷಮ್ಯದಿಂದ ಆಟೋ ಚಾಲಕನ ಹತ್ಯೆ

ಹಳೇ ದ್ವೇಷ ಹಾಗೂ ರಿಯಲ್ಎಸ್ಟೇಟ್ ವ್ಯವಹಾರದಲ್ಲಿ ಕಿರಿಕ್ ಆಗಿ ಹತ್ಯೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬಾಣಸವಾಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾರ್ತಿಕೇಯನ್ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್‌ ದಾಖಲಾಗಿತ್ತು. ಎರಡು ವರ್ಷಗಳ ಹಿಂದೆ ರೌಡಿಶೀಟ್‌ನಿಂದ ಕೈ ಬಿಡಲಾಗಿತ್ತು. ಈ ಹಿಂದೆ ಬಾಣಸವಾಡಿ ಪೊಲೀಸರಿಂದ ರೌಡಿಶೀಟರ್‌ ಕಾರ್ತಿಗೇಯನ್ ಗಡಿಪಾರಾಗಿದ್ದ. ನಂತರ ಮತ್ತೆ ಬೆಂಗಳೂರಿಗೆ ಬಂದು‌ ಬಾಣಸವಾಡಿಯಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಕಚೇರಿ ತೆರೆದಿದ್ದ. ಆದರೆ, ಮಂಗಳವಾರ ರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com