ಸೆಕ್ಸ್ ವಿಡಿಯೋ ಬಿಡುಗಡೆ ಮಾಡಿದವನನ್ನು ಯಾಕೆ SIT ಬಂಧಿಸಿಲ್ಲ?: ಪರಮೇಶ್ವರ್ ಗೆ HDK ಪ್ರಶ್ನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ ವ್ಯಕ್ತಿಯ ವಿರುದ್ಧದ ದೂರಿನ ಬಗ್ಗೆ ಪೊಲೀಸರು ಏಕೆ ಕ್ರಮಕೈಗೊಂಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜಿ. ಪರಮೇಶ್ವರ್-ಎಚ್ ಡಿ ಕುಮಾರಸ್ವಾಮಿ
ಜಿ. ಪರಮೇಶ್ವರ್-ಎಚ್ ಡಿ ಕುಮಾರಸ್ವಾಮಿPTI
Updated on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಬಿಡುಗಡೆ ಮಾಡಿದ್ದ ವ್ಯಕ್ತಿಯ ವಿರುದ್ಧದ ದೂರಿನ ಬಗ್ಗೆ ಪೊಲೀಸರು ಏಕೆ ಕ್ರಮಕೈಗೊಂಡಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿಮ್ಮ ತನಿಖೆ ಎಚ್ ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಮೇಲೆ ಮಾತ್ರ ಯಾಕೆ ಸೀಮಿತವಾಗಿದೆ. ವಿಡಿಯೋ ಬಿಡುಗಡೆ ಮಾಡಿದವರನ್ನ ಯಾಕೆ ತನಿಖೆ ಮಾಡುತ್ತಿಲ್ಲ ಎಂದು ಪರಮೇಶ್ವರ್ ಅವರನ್ನು ಪ್ರಶ್ನಿಸಿದ್ದಾರೆ.

ಕಳೆದ ಏಪ್ರಿಲ್ 21ರಂದು ರಾತ್ರಿ 8 ಗಂಟೆಗೆ ನವೀನ್ ಗೌಡ ಎಂಬಾತ ಮುಂದಿನ ಕೆಲವು ಸೆಕೆಂಡುಗಳಲ್ಲಿ ವಾಟ್ಸಾಪ್‌ನಲ್ಲಿ ಸ್ಪಷ್ಟ ವೀಡಿಯೊಗಳನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದನು. ಆತನ ವಿರುದ್ಧ ಜೆಡಿಎಸ್ ದೂರು ನೀಡಿದ್ದರು. ಯಾಕೆ ಆತನನ್ನು ಇನ್ನು ಬಂಧಿಸಿಲ್ಲ ಎಂದು ಪರಮೇಶ್ವರ್ ರನ್ನು ಕೇಳಲು ಬಯಸುತ್ತೇನೆ ಎಂದರು. ಇನ್ನು ಅಪಹರಣಕ್ಕೊಳಗಾದ ಮಹಿಳೆಯನ್ನು ಫಾರ್ಮ್‌ಹೌಸ್‌ನಿಂದ ರಕ್ಷಿಸಲಾಗಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ಆದರೆ ಪೊಲೀಸರ ಪ್ರಕಾರ, ಅವರು ತಮ್ಮ ಸಂಬಂಧಿಕರ ಮನೆಯಲ್ಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಕ್ಷಿಸಲ್ಪಟ್ಟ ಸಂತ್ರಸ್ತ ಮಹಿಳೆಯನ್ನು ನ್ಯಾಯಾಧೀಶರ ಮುಂದೆ ಏಕೆ ಹಾಜರುಪಡಿಸಲಾಗಿಲ್ಲ? ಕುಮಾರಕೃಪಾ ಅತಿಥಿ ಗೃಹದಲ್ಲಿ ಆಕೆಯ ಕುಟುಂಬದ 12 ಮಂದಿಗೆ ರಾಜೋಪಚಾರ ಏಕೆ? ಎಂದು ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಏಪ್ರಿಲ್ 26ರಂದು ಕರ್ನಾಟಕದಲ್ಲಿ ಲೋಕಸಭೆಯ ಮೊದಲ ಹಂತದ ಮತದಾನಕ್ಕೂ ಮುನ್ನ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ವೀಡಿಯೊಗಳು ಬಿಡುಗಡೆಯಾಗಲು ಪ್ರಾರಂಭಿಸಿದವು.

ಜಿ. ಪರಮೇಶ್ವರ್-ಎಚ್ ಡಿ ಕುಮಾರಸ್ವಾಮಿ
ಅಪಹರಣ ಪ್ರಕರಣ: HD ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್!

ಈ ಬಗ್ಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಅವರಿಗೆ ಹಾಸನದ ಅಶ್ಲೀಲ ವಿಡಿಯೋಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿ ಏಪ್ರಿಲ್ 28ರಂದು ಪತ್ರ ಬರೆದಿದ್ದರು. ಅಲ್ಲದೆ ಈ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು.

ಹಾಸನ ಲೋಕಸಭೆ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ಅವರು, ಮತದಾನ ಮುಗಿದ ಒಂದು ದಿನದ ನಂತರ ಏಪ್ರಿಲ್ 27ರಂದು ದೇಶ ಬಿಟ್ಟು ಪಲಾಯನ ಮಾಡಿದ್ದರು. ಅಲ್ಲದೆ ಎಸ್‌ಐಟಿ ಮುಂದೆ ಹಾಜರಾಗುವಂತೆ ನೀಡಿದ್ದ ಸಮನ್ಸ್‌ಗಳನ್ನು ಅವರು ತಪ್ಪಿಸಿದ್ದಾರೆ. ಹಾಸನ ಸಂಸದ ಶಾಮೀಲಾಗಿದ್ದಾರೆ ಎನ್ನಲಾದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆಯೊಬ್ಬರನ್ನು ಅಪಹರಣ ಮಾಡಿದ ಆರೋಪದ ಮೇಲೆ ಪ್ರಜ್ವಲ್ ತಂದೆ ಹಾಗೂ ಶಾಸಕ ಹೆಚ್ ಡಿ ರೇವಣ್ಣ ಹಾಗೂ ಅವರ ಆಪ್ತ ಸತೀಶ್ ಬಾಬಣ್ಣ ಅವರನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com