ಹಾಸನ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ!

ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.
ಅತಿಥಿ ಉಪನ್ಯಾಸಕಿ ದೀಪಾ
ಅತಿಥಿ ಉಪನ್ಯಾಸಕಿ ದೀಪಾ
Updated on

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.

ಇನ್ನೂ ಮದುವೆಯಾಗದ 34 ವರ್ಷದ ದೀಪಾ ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕಿಯಾಗಿದ್ದಾರೆ. ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ನಿವಾಸಿ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿಯಾಗಿದ್ದ ದೀಪಾ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅತಿಥಿ ಉಪನ್ಯಾಸಕಿ ದೀಪಾ
ಮುಂಡರಗಿ: ಬೀಯರ್ ಬಾಟಲಿಯಿಂದ ಹೊಡೆದು ಯುವಕನ ಹತ್ಯೆ!

ಗುರುವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com