ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಗಲಾಟೆ
ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಗಲಾಟೆ

ಮೈಸೂರು: ಕಾಲೇಜಿನಲ್ಲಿ ಶ್ರೀರಾಮನ ಹಾಡು ಹಾಡಿದ ಗಾಯಕ ಶ್ರೀಹರ್ಷ, ಮುಸ್ಲಿಂ ವಿದ್ಯಾರ್ಥಿಗಳಿಂದ ಗಲಾಟೆ, ವಿಡಿಯೋ ವೈರಲ್

ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ಮೈಸೂರು: ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗಲಾಟೆ ಮಾಡಿದ ಘಟನೆ ನಡೆದಿದೆ.

ಸಮಾರಂಭಕ್ಕೆ ಗಾಯಕ ಶ್ರೀಹರ್ಷ ಅವರನ್ನು ಕರೆಸಲಾಗಿತ್ತು. ವೇದಿಕೆ ಮೇಲೆ ಶ್ರೀಹರ್ಷ ಜಯತು ಜಯತು ಜೈ ಶ್ರೀರಾಮ್ ಎಂದು ಹಾಡಿದರು. ಈ ವೇಳೆ ಕಾರ್ಯಕ್ರಮಕ್ಕೆ ಅಡ್ಡಿ ಪಡಿಸಿದ ಮುಸ್ಲಿಂ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆ.

ಕಾರ್ಯಕ್ರಮವನ್ನು ಹಾಳುಗೆಡವಿದ್ದಲ್ಲದೆ ಒಬ್ಬ ಹಿಂದೂ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇನ್ನು ಗಲಾಟೆ ಶುರುವಾಗುತ್ತಿದಂತೆ ಪೊಲೀಸರು ಸ್ಟೇಡಿಯಂಗೆ ಬಂದು ವಿದ್ಯಾರ್ಥಿಗಳನ್ನು ಅಲ್ಲಿಂದ ಕಳುಹಿಸಿದ್ದಾರೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗುತ್ತಿದ್ದು ನೆಟ್ಟಿಗರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಕರ್ನಾಟಕದಲ್ಲಿದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ. ಇವರ ಹಾವಳಿ ಜಾಸ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com