ಉಡುಪಿ: ಮಲ್ಪೆ ಬೀಚ್‌ನಲ್ಲಿ ಜೀವರಕ್ಷಕನ ಮೇಲೆ ಪ್ರವಾಸಿಗರಿಂದ ಹಲ್ಲೆ; ಪರಾರಿ

ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಲೈಫ್‌ಗಾರ್ಡ್‌ ಪದೇ ಪದೆ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ ಪ್ರವಾಸಿಗರು ಈಜುವುದನ್ನು ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಮಲ್ಪೆ ಬೀಚ್‌
ಮಲ್ಪೆ ಬೀಚ್‌
Updated on

ಉಡುಪಿ: ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಲೈಫ್‌ಗಾರ್ಡ್‌ ಪದೇ ಪದೆ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ ಪ್ರವಾಸಿಗರು ಈಜುವುದನ್ನು ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಉದ್ಯಾವರ-ಪಿತ್ರೋಡಿಯ ಜೀವರಕ್ಷಕ ತೇಜ ಕೋಟ್ಯಾನ್ ಅವರು ಅಪಾಯಕಾರಿ ಅಲೆಗಳ ಬಗ್ಗೆ ಪ್ರವಾಸಿಗರಿಗೆ ತಿಳಿಸಿದರೂ, ಗುಂಪು ಅದನ್ನು ನಿರ್ಲಕ್ಷಿಸಿ ಅಪಾಯದ ವಲಯದಲ್ಲಿ ಈಜಲು ಹೋಗಿದೆ. ಕೋಟ್ಯಾನ್ ಅವರು ಈಜುವುದನ್ನು ಮುಂದುವರಿಸಬೇಡಿ ಎಂದು ಕೇಳಿದಾಗ, ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ.

ಮಲ್ಪೆ ಬೀಚ್‌
ಬೆಚ್ಚಿಬೀಳಿಸುವ ಘಟನೆ: 10ನೇ ತರಗತಿ ಪಾಸಾದ ಖುಷಿಯಲ್ಲಿದ್ದ ಬಾಲಕಿಯ ರುಂಡ ಕತ್ತರಿಸಿ ಪರಾರಿಯಾದ ಪಾಪಿ!

ಸ್ಥಳದಲ್ಲಿದ್ದ ಇತರ ಜೀವರಕ್ಷಕರು ಮತ್ತು ಗೃಹರಕ್ಷಕರು ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಕೆಎ 04 ಎಡಿ 8286 ನೋಂದಣಿ ಸಂಖ್ಯೆಯ ಸ್ವಿಫ್ಟ್ ಮಾರುತಿ ಕಾರಿನಲ್ಲಿ ಅವರು ಪರಾರಿಯಾಗಿದ್ದಾರೆ. ಘಟನೆ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com