ದುಬೈ-ಮಂಗಳೂರು ವಿಮಾನದಲ್ಲಿ ಅಶಿಸ್ತಿನ ವರ್ತನೆ: ಪ್ರಯಾಣಿಕನ ವಿರುದ್ಧ FIR ದಾಖಲು!

ದುಬೈ ಮತ್ತು ಮಂಗಳೂರು ವಿಮಾನದಲ್ಲಿ ಪ್ರಯಾಣದ ವೇಳೆ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಪ್ರಯಾಣಿಕರೊಬ್ಬರ ವಿರುದ್ಧ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಂಗಳೂರು: ದುಬೈ ಮತ್ತು ಮಂಗಳೂರು ವಿಮಾನದಲ್ಲಿ ಪ್ರಯಾಣದ ವೇಳೆ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ಪ್ರಯಾಣಿಕರೊಬ್ಬರ ವಿರುದ್ಧ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಮಾನದ ಭದ್ರತಾ ಸಂಯೋಜಕ ಸಿದ್ಧಾರ್ಥದಾಸ್ ಅವರು ಮೊಹಮ್ಮದ್ ಬಿ ಸಿ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೇ 9 ರಂದು ಮುಂಜಾನೆ ಈ ಘಟನೆ ನಡೆದಿದ್ದು, ಅದೇ ಸಂಜೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೊಹಮ್ಮದ್ ಮೇ 8 ರಂದು ರಾತ್ರಿ ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಪ್ರಯಾಣಿಸಿ ಮರುದಿನ ಬೆಳಿಗ್ಗೆ 7.30 ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದರು. ವಿಮಾನವು ದುಬೈನಿಂದ ಟೇಕಾಫ್ ಆದ ನಂತರ, ಮೊಹಮ್ಮದ್ ಶೌಚಾಲಯಕ್ಕೆ ಹೋಗಿ ನಂತರ ಹೊರಗೆ ಬಂದು ಆ ವಿಮಾನದ ಪ್ರಯಾಣಿಕರ ಪಟ್ಟಿಯಲ್ಲಿಲ್ಲದ ಕೃಷ್ಣ ಎಂಬ ವ್ಯಕ್ತಿಯ ಬಗ್ಗೆ ಸಿಬ್ಬಂದಿ ಬಳಿ ವಿವರ ಕೇಳಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1, ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಅನಾಮಧೇಯ ವ್ಯಕ್ತಿ ವಿರುದ್ಧ ಕೇಸ್ ದಾಖಲು

ಆತ ಅಸಂಬದ್ಧ ಪ್ರಶ್ನೆಗಳನ್ನು ಕೇಳುವ ಮೂಲಕ ಸಿಬ್ಬಂದಿಯನ್ನು ಕೆರಳಿಸಿದ್ದಾರೆ. ಜೊತೆಗೆ ಅನಗತ್ಯವಾಗಿ ಸೇವಾ ಬಟನ್ ಅನ್ನು ಹಲವಾರು ಬಾರಿ ಒತ್ತುವ ಮೂಲಕ ಸಿಬ್ಬಂದಿಗೆ ತೊಂದರೆ ನೀಡಿದರು. ನಂತರ ವಿಮಾನದಲ್ಲಿದ್ದ ಲೈಫ್ ಜಾಕೆಟ್ ಕಳಚಿ, ಸಿಬ್ಬಂದಿಗೆ ನೀಡಿ, ವಿಮಾನ ಇಳಿದ ಬಳಿಕ ಬಳಸುವುದಾಗಿ ಹೇಳಿದ್ದರು. ವಿಮಾನವು ಅರಬ್ಬಿ ಸಮುದ್ರದ ಮೇಲಿರುವಾಗ ಸಮುದ್ರದ ಮೇಲೆ ಏಕಾಂಗಿಯಾಗಿ ಹಾರಲು ಬಯಸುವುದಾಗಿ ಅವರು ಹೇಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com