ಶಾಸಕ ಪ್ರದೀಪ್ ಈಶ್ವರ್ 'ಸೂಪರ್ 60' ಯೋಜನೆ: SSLC ವಿದ್ಯಾರ್ಥಿಗಳ ಸಾಧನೆ

ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ.
ಪರಿಶ್ರಮ ನೀಟ್ ಅಕಾಡೆಮಿ ಮಕ್ಕಳೊಂದಿಗೆ ಶಾಸಕ ಪ್ರದೀಪ್ ಈಶ್ವರ್
ಪರಿಶ್ರಮ ನೀಟ್ ಅಕಾಡೆಮಿ ಮಕ್ಕಳೊಂದಿಗೆ ಶಾಸಕ ಪ್ರದೀಪ್ ಈಶ್ವರ್
Updated on

ಬೆಂಗಳೂರು: ‘ಸೂಪರ್ 60’ ಯೋಜನೆಯಡಿ ಎಸ್ ಎಸ್ ಎಲ್ ಸಿ ಓದುತ್ತಿರುವ 60 ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಯಿತು. ತರಬೇತಿ ಪಡೆದ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಗೆ ಮತ್ತು ತಮ್ಮ ಸಂಸ್ಥೆಗಳಿಗೆ ಹೆಮ್ಮೆ ತಂದಿದ್ದಾರೆ ಎಂದು ಪರಿಶ್ರಮ ನೀಟ್ ಅಕಾಡೆಮಿ ತಿಳಿಸಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಾಸಕ ಪ್ರದೀಪ್ ಈಶ್ವರ್ ಅವರು ಜಿಲ್ಲೆಯಲ್ಲಿ ‘ಸೂಪರ್ 60’ ಎಂಬ ವಿನೂತನ ಯೋಜನೆಯನ್ನು ರೂಪಿಸಿದ್ದಾರೆ ಎಂದು ಅಕಾಡೆಮಿ ತಿಳಿಸಿದೆ. ಇದರಡಿ ಚಿಕ್ಕಬಳ್ಳಾಪುರ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಬಡ ಕುಟುಂಬದ 60 ಮಕ್ಕಳು, ಅನಾಥರು ಮತ್ತು ಒಂಟಿ ಪೋಷಕರ ಮಕ್ಕಳನ್ನು ಆಯ್ಕೆ ಮಾಡಿ ಅನುಮತಿಯೊಂದಿಗೆ ತರಬೇತಿ ನೀಡಲಾಯಿತು.

ಶಾಸಕರ ಯೋಜನೆಯು ಅಭೂತಪೂರ್ವ ಯಶಸ್ಸನ್ನು ಕಂಡಿದೆ ಎಂದು ಎಸ್‌ಎಸ್‌ಎಲ್‌ಸಿ ಫಲಿತಾಂಶಗಳು ತೋರಿಸಿವೆ. ಶಾಸಕ ಪ್ರದೀಪ್ ಈಶ್ವರ್ ಅವರು ವಿದ್ಯಾರ್ಥಿಗಳನ್ನು ಖುದ್ದು ಭೇಟಿಯಾಗಿ ಯೋಜನೆಯಡಿ ಉತ್ತಮ ಅಂಕ ಗಳಿಸಿ ಉತ್ತೀರ್ಣರಾದವರನ್ನು ಅಭಿನಂದಿಸಿದರು.‘‘ಯಾವುದೇ ಕುಟುಂಬದ ಜೀವನಮಟ್ಟ ಅಭಿವೃದ್ಧಿಯಾಗಬೇಕು ಎಂದರೆ ಮಕ್ಕಳಿಗೆ ಶಿಕ್ಷಣ ಸಿಗಬೇಕು ಎಂಬ ಅಂಶವನ್ನು ಗುರುತಿಸಿ ಸೂಪರ್ 60 ಯೋಜನೆ ಆರಂಭಿಸಲಾಗಿದೆ ಎಂದರು.

3,000 ವಿದ್ಯಾರ್ಥಿಗಳಿಗೆ ಶಾಸಕರು 1,000 ರೂಪಾಯಿಗಳ ವಿದ್ಯಾರ್ಥಿವೇತನವನ್ನು ನೀಡಿದರು ಎಂದು ಅಕಾಡೆಮಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com