ಕನ್ನಡಿಗರ ತೆರಿಗೆ ಹಣ ಲೂಟಿ ಹೊಡೆದ ಸರ್ಕಾರ ಸಿಕ್ಕಿಬಿದ್ದಿದೆ: ಪರಿಷತ್ ಚುನಾವಣೆಯಲ್ಲಿ ಅಕ್ರಮದ ಆರೋಪ ಮಾಡಿದ ಬಿಜೆಪಿ!

ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪ ಮಾಡಿದೆ.
Gift items found in the name of congress candidate for MLC elections in Karnataka
ಕಾಂಗ್ರೆಸ್ ಅಭ್ಯರ್ಥಿ ಹೆಸರು ಇರುವ ಗಿಫ್ಟ್ ವಸ್ತುಗಳುonline desk
Updated on

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪ ಮಾಡಿದೆ.

ಮತದಾರರಿಗೆ ಹಂಚಲು ತಂದಿದ್ದು ಎನ್ನಲಾದ ವಸ್ತುಗಳಿದ್ದ ವೀಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

ಕನ್ನಡಿಗರ ತೆರಿಗೆಯನ್ನು ಲೂಟಿ ಹೊಡೆದ #ATMSarkara ಅದನ್ನು ಅದನ್ನು ಚುನಾವಣೆಗಳಲ್ಲಿ ಅಕ್ರಮವಾಗಿ ಹಂಚಲು ಹೋಗಿ ಸಿಕ್ಕಿಬಿದ್ದಿದೆ ಎಂದು ಬಿಜೆಪಿ ಟ್ವಿಟರ್ ಖಾತೆಯಲ್ಲಿ ಬರೆದಿದೆ.

Gift items found in the name of congress candidate for MLC elections in Karnataka
ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 66 ಸಾವಿರ ಅರ್ಹ ಮತದಾರರು

"ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿ ಗೌಡ ಅವರು ಸುಮಾರು 20 ಸಾವಿರಕ್ಕೂ ಅಧಿಕ ಉಡುಗೊರೆಗಳನ್ನು ಕೊರಿಯರ್ ಮೂಲಕ ಕಳಿಸಲು ಸಂಚು ರೂಪಿಸಿದ್ದರು ವಿದ್ಯಾವಂತ ಪದವೀಧರರಿಗೆ ಆಮಿಷ ಒಡ್ಡಿ ಮತ ಕೇಳುವಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾ ಆಯೋಗ ಕೂಡಲೇ ಅಸಿಂಧುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com