ಶಿರಾಡಿ ಘಾಟ್‌ನಲ್ಲಿ ಕಾರು-ಟ್ರಕ್ ಡಿಕ್ಕಿ, ಒಂದೇ ಕುಟುಂಬದ ಇಬ್ಬರು ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನಲ್ಲಿ ಮಂಗಳವಾರ ಮುಂಜಾನೆ ಎಸ್‌ಯುವಿ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಜ್ಜುಗುಜ್ಜಾಗಿರುವ ಕಾರು
ನಜ್ಜುಗುಜ್ಜಾಗಿರುವ ಕಾರು
Updated on

ಸಕಲೇಶಪುರ: ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನಲ್ಲಿ ಮಂಗಳವಾರ ಮುಂಜಾನೆ ಎಸ್‌ಯುವಿ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಜ್ಜುಗುಜ್ಜಾಗಿರುವ ಕಾರು
ನೈಸ್ ರಸ್ತೆಯಲ್ಲಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಮೃತರು ಮಂಗಳೂರು ತಾಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ​​ಗ್ರಾಮದವರು. ಬೆಂಗಳೂರಿನಲ್ಲಿ ಸಂಬಂಧಿಕರ ಮದುವೆ ಔತಣ ಕೂಟದಲ್ಲಿ ಪಾಲ್ಗೊಂಡು ಕುಟುಂಬ ಸಮೇತರಾಗಿ ಮಂಗಳೂರಿಗೆ ತೆರಳುತ್ತಿದ್ದಾಗ ಶಿರಾಡಿ ಘಾಟ್‌ನ ಕೆಂಪುಹೊಳೆ ಸೇತುವೆ ಬಳಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆಗಾಗಿ ಟ್ರಕ್ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com