ಮೈಸೂರು: ಕಲುಷಿತ ನೀರು ಕುಡಿದು 13 ಮಂದಿ ಅಸ್ವಸ್ಥ

ಕೊಳ್ಳೇಗಾಲ ಸಮೀಪದ ಮುದುವೇನಹಳ್ಳಿಯಲ್ಲಿ ಪೈಪ್‌ಲೈನ್ ಮೂಲಕ ಸರಬರಾಜು ಮಾಡಲಾಗಿದ್ದ ಕಲುಷಿತ ನೀರು ಸೇವಿಸಿ 13 ಮಂದಿ ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಭಾನುವಾರ ವರದಿಯಾಗಿದೆ.
ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ
ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ
Updated on

ಮೈಸೂರು: ಕೊಳ್ಳೇಗಾಲ ಸಮೀಪದ ಮುದುವೇನಹಳ್ಳಿಯಲ್ಲಿ ಪೈಪ್‌ಲೈನ್ ಮೂಲಕ ಸರಬರಾಜು ಮಾಡಲಾಗಿದ್ದ ಕಲುಷಿತ ನೀರು ಸೇವಿಸಿ 13 ಮಂದಿ ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ಭಾನುವಾರ ವರದಿಯಾಗಿದೆ.

ವಾಂತಿ ಮತ್ತು ಅತಿಸಾರದಿಂದ ಬಳಲುತ್ತಿದ್ದ ಜನರನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಕೊಳ್ಳಗಾಲದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

ಕೊಳಚೆ ನೀರು ಮತ್ತು ಮಳೆ ನೀರು ಬೋರ್‌ವೆಲ್‌ಗೆ ಸೇರುತ್ತಿದ್ದು, ಇದು ನೀರು ಕಲುಷಿತಗೊಳ್ಳಲು ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ
ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಮಂದಿ ಅಸ್ವಸ್ಥ, ಐವರ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

ಈ ನಡುವೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಗ್ರಾಮಕ್ಕೆ ಭೇಟಿ ನೀಡಿ, ಟ್ಯಾಂಕರ್‌ನಲ್ಲಿ ನೀರು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಗಾಗಿ ನೀರಿನ ಮಾದರಿಗಳನ್ನು ಸಂಗ್ರಹಿಸಲೂ ಸೂಚಿಸಿದರು.

ಆಸ್ಪತ್ರೆಗೆ ದಾಖಲಾದವರಲ್ಲಿ ಹೆಚ್ಚಿನವರು ಈಗಾಗಲೇ ಚೇತರಿಸಿಕೊಂಡಿದ್ದಾರೆ, ಮೂವರಿಗೆ ಚಿಕಿತ್ಸೆ ಮುಂದುವರೆದಿದ್ದು, ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ.

ಈ ನಡುವೆ ನೈರ್ಮಲ್ಯವನ್ನು ಸುಧಾರಿಸಿ ಶುದ್ಧ ನೀರು ಪೂರೈಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com