ಮಂಗಳೂರಿನಲ್ಲಿ ರಸ್ತೆ ಮಧ್ಯೆ ನಮಾಜ್: ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲು

ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತರ ಗುಂಪಿನ ವಿರುದ್ಧ ಮಂಗಳೂರು ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಸ್ತೆ ಮಧ್ಯೆ ಬಾಂಧವರಿಂದ ನಮಾಜ್
ರಸ್ತೆ ಮಧ್ಯೆ ಬಾಂಧವರಿಂದ ನಮಾಜ್TNIE
Updated on

ಮಂಗಳೂರು: ನಗರದ ಕಂಕನಾಡಿಯ ಮಸೀದಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದ ಅಪರಿಚಿತರ ಗುಂಪಿನ ವಿರುದ್ಧ ಮಂಗಳೂರು ನಗರ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಾರ್ವಜನಿಕ ದಾರಿಗೆ ಅಡ್ಡಿಪಡಿಸುವುದು, ಕಾನೂನುಬಾಹಿರ ಸಭೆ ಇತ್ಯಾದಿಗಳಿಗೆ ಸಂಬಂಧಿಸಿದ ವಿವಿಧ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೇ 24ರಂದು ನಡೆದ ಘಟನೆಯ ತನಿಖೆ ನಡೆಯುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿಕೆ ನೀಡಿದ್ದಾರೆ.

ಘಟನೆಯ ವಿಡಿಯೋ ವೈರಲ್ ಆಗಿತ್ತು. ವೀಡಿಯೊದಲ್ಲಿ ಹತ್ತಕ್ಕೂ ಹೆಚ್ಚು ಪುರುಷರು ರಸ್ತೆಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ಕಂಡು ವಾಹನ ಚಾಲಕರು ಯು-ಟರ್ನ್ ತೆಗೆದುಕೊಳ್ಳುವಂತೆ ಮಾಡಿತ್ತು. ಅಲ್ಲದೆ ಘಟನೆ ಕುರಿತು ಕ್ರಮ ಕೈಗೊಳ್ಳುವಂತೆ ವಿಎಚ್‌ಪಿ ಆಗ್ರಹಿಸಿತ್ತು.

ರಸ್ತೆ ಮಧ್ಯೆ ಬಾಂಧವರಿಂದ ನಮಾಜ್
ಮಂಡ್ಯ: ಬೆಳ್ಳೂರಿನಲ್ಲಿ ಹಿಂದೂ ಯುವಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ, ಮನೆಗಳಿಗೆ ನುಗ್ಗಿ ಬೆದರಿಕೆ!

ಇದಕ್ಕೂ ಮುನ್ನ ಮಾತನಾಡಿದ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಸಾರ್ವಜನಿಕ ರಸ್ತೆಯಲ್ಲಿ ನಮಾಜ್ ಮಾಡಿದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಸಾರ್ವಜನಿಕ ರಸ್ತೆಯಲ್ಲಿ ಜನರು ಪ್ರಾರ್ಥನೆ ಸಲ್ಲಿಸುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಅವರು, ಹಿಂದೂ ಸಮಾಜ ಎಚ್ಚೆತ್ತುಕೊಂಡಿದ್ದು, ಇಂತಹ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳದಿರುವುದು ಗಲಭೆಗೆ ಕಾರಣವಾಗಬಹುದು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com