ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆ ಆರಂಭ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ ತನಿಖೆಯನ್ನು ಆರಂಭಿಸಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆ ಆರಂಭ
Updated on

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನ್ನ ತನಿಖೆಯನ್ನು ಆರಂಭಿಸಿದೆ.

ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಅಧಿಕಾರಿಗಳು ಮಂಗಳವಾರ ಸಂಜೆ ಶಿವಮೊಗ್ಗಕ್ಕೆ ಭೇಟಿ ನೀಡಿ, ವಿನೋಬನಗರದಲ್ಲಿರುವ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿ ತಪಾಸಣೆ ನಡೆಸಿದರು.

ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್‌ಪಿ ಮೊಹಮ್ಮದ್‌ ರಫಿ ನೇತೃತ್ವದ ಆರು ಮಂದಿ ತಂಡ ಭೇಟಿ ನೀಡಿ, ಮೃತ ಅಧಿಕಾರಿ ಚಂದ್ರಶೇಖರನ್ ಪತ್ನಿ ಕವಿತಾರಿಂದ ಮಾಹಿತಿ ಸಂಗ್ರಹಿಸಿತು.

ಚಂದ್ರಶೇಖರನ್ ಅವರಿಗೆ ಸಂಬಂಧಿಸಿದ ದಾಖಲೆ ಪರಿಶೀಲಿಸಿ ಸಾಕ್ಷಾಧಾರಗಳನ್ನು ಕಲೆಹಾಕಿದ ಸಿಐಡಿ ಅಧಿಕಾರಿಗಳು, ಸಾಕ್ಷಾಧಾರ ಪರಿಶೀಲನೆ ವೇಳೆ ದೊರಕಿದ ಚಂದ್ರಶೇಖರನ್ ಅವರ ಬ್ಯಾಗ್‌, ಬ್ಯಾಗ್‌ನಲ್ಲಿದ್ದ ಪೆನ್ ಡ್ರೈವ್ ಹಾಗೂ ಲ್ಯಾಪ್‌ಟಾಪ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದರು.

ಪೆನ್‌ ಡ್ರೈವ್‌ ಮೇಲೆ ಪದ್ಮನಾಭ್‌ ಎಂದು ಬರೆದಿದೆ ಎನ್ನಲಾಗಿದೆ. ಇನ್ನು ಪೆನ್‌ ಒಂದನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಪದ್ಮನಾಭ ಅವರು ಪಾಲಿಕೆಯ ಎಂಡಿ ಆಗಿದ್ದು, ಡೆತ್ ನೋಟ್‌ನಲ್ಲಿ ಹೆಸರಿಸಲಾದ ಅಧಿಕಾರಿಗಳಲ್ಲಿ ಅವರೂ ಸೇರಿದ್ದಾರೆಂದು ತಿಳಿದುಬಂದಿದೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಿಐಡಿ ತನಿಖೆ ಆರಂಭ
KMVSTDC ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆಗೆ ಪ್ರಹ್ಲಾದ್ ಜೋಶಿ ಒತ್ತಾಯ

ಈ ನಡುವೆ ಎಫ್‌ಐಆರ್ ದಾಖಲಾಗಿರುವ ವಿನೋಭಾ ನಗರ ಠಾಣೆಗೂ ಸಿಐಡಿ ಅಧಿಕಾರಿಗಳು ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಆದರೆ, ಸಿಐಡಿ ಅಧಿಕಾರಿಗಳು ಯಾವುದೇ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲಿಲ್ಲ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪ್ರಕರಣವನ್ನು ಸಿಐಡಿ ತನಿಖೆ ನಡೆಸಲಿದೆ ಎಂದು ಹೇಳಿದರು.

ಕೆಎಂವಿಎಸ್‌ಟಿಡಿಸಿ ಅಧಿಕಾರಿ 48 ವರ್ಷದ ಚಂದ್ರಶೇಖರನ್ ಪಿ ಅವರು ತಮ್ಮ ಸ್ವಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಅವರು ಸುಮಾರು ಆರು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಸೂಸೈಡ್ ನೋಟ್‌ನಲ್ಲಿ, ತಮ್ಮ ಸಾವಿಗೆ ಮೂವರು ಹಿರಿಯ ಸಹೋದ್ಯೋಗಿಗಳು ಕಾರಣರಾಗಿದ್ದು, ಅವರು ಸಂಸ್ಥೆಯ ಸುಮಾರು 87 ಕೋಟಿ ರೂಪಾಯಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆಂದು ತಿಳಿದುಬಂದಿದೆ.

ಈ ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ಪಾಲಿಕೆಯ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ.

ಎಂಜಿ ರಸ್ತೆಯಲ್ಲಿರುವ ಬ್ಯಾಂಕ್ ಶಾಖೆಯಲ್ಲಿ ಗ್ರಾಹಕರು ಉಳಿತಾಯ ಮತ್ತು ಚಾಲ್ತಿ ಖಾತೆಗಳ ನಡುವೆ ಹಣವನ್ನು ವರ್ಗಾಯಿಸಲು ಮತ್ತು ಸ್ಥಿರ ಠೇವಣಿ ಖಾತೆಗಳನ್ನು ಲಿಂಕ್ ಮಾಡಲು ಗ್ರಾಹಕರಿಗೆ ಅನುಮತಿಸುವ ಸ್ವೀಪ್-ಇನ್ ಮತ್ತು ಸ್ವೀಪ್-ಔಟ್ ಖಾತೆಯನ್ನು ತೆರೆಯಲು ಸಚಿವರು ಮತ್ತು ಅಧಿಕಾರಿಯಿಂದ ನಿರ್ದೇಶಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಇದರಿಂದ ಬೇಸತ್ತು ತಾವು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಚಂದ್ರಶೇಖರ್ ಡೆತ್ ನೋಟ್ ನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com