
ಬೆಂಗಳೂರು: ಲೋಕಸಭೆ ಚುನಾವಣೆ ಬೆನ್ನಲ್ಲೇ ಜೂನ್ 3ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ರಾಜ್ಯ ಸರ್ಕಾರ ವಿಶೇಷ ರಜೆ ಘೋಷಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಕರ್ನಾಟಕ ವಿಧಾನ ಪರಿಷತ್ ಗೆ ಈಶಾನ್ಯ – ನೈಋತ್ಯ – ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ – ನೈಋತ್ಯ – ದಕ್ಷಿಣ ಶಿಕ್ಷಕರ ಕ್ಷೇತ್ರಗಳು ಸೇರಿ ಒಟ್ಟು 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರ ಮತದಾರರಿಗೆ ಮತ್ತು ಶಿಕ್ಷಕರಿಗೆ ವಿಶೇಷ ರಜೆ ನೀಡಿ ರಾಜ್ಯ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದೆ.
ಇತ್ತ ವಿಧಾನ ಪರಿಷತ್ ಚುನಾವಣೆ ಗೆಲ್ಲೋಕೆ ಬಿಜೆಪಿ -ಜೆಡಿಎಸ್ ನಾಯಕರು ಮೊದಲ ಸಮನ್ವಯ ಸಭೆ ನಡೆಸಿದ್ದು, ಸಭೆಯಲ್ಲಿ ಜೂನ್ 3ರಂದು ನಡೆಯೋ ಶಿಕ್ಷಕ, ಮತ್ತು ಪದವೀಧರ ಕ್ಷೇತ್ರಗಳನ್ನ ಗೆಲ್ಲೋಕೆ ರಣತಂತ್ರ ರೂಪಿಸಲಾಗಿದೆ.
Advertisement