ಬೀದರ್‌: ಜಿಎನ್‌ಡಿ ಕಾಲೇಜಿನಲ್ಲಿ ಜೈ ಶ್ರೀ ರಾಮ್ ಘೋಷಣೆ; ವಿದ್ಯಾರ್ಥಿಗಳ ನಡುವೆ ಮಾರಾಮಾರಿ

ಬೀದರ್ ನಗರದ ಹೊರವಲಯದ ಮೈಲೂರಿನಲ್ಲಿರುವ ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಬುಧವಾರ ಎರಡು ಸಮುದಾಯದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
ಜಿಎನ್‌ಡಿ ಕಾಲೇಜು
ಜಿಎನ್‌ಡಿ ಕಾಲೇಜು
Updated on

ಬೀದರ್‌: ಬೀದರ್ ನಗರದ ಹೊರವಲಯದ ಮೈಲೂರಿನಲ್ಲಿರುವ ಗುರುನಾನಕ್ ದೇವ್ ಪದವಿ ಕಾಲೇಜಿನಲ್ಲಿ ಬುಧವಾರ ಎರಡು ಸಮುದಾಯದ ವಿದ್ಯಾರ್ಥಿಗಳ ನಡುವೆ ಜಗಳವಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಗುರುನಾನಕ್‌ ದೇವ್‌ ಪದವಿ ಕಾಲೇಜಿನಲ್ಲಿ ಮೇ 31ರಂದು ಯುವಜನೋತ್ಸವ ಆಯೋಜಿಸಲು ಉದ್ದೇಶಿಸಿದ್ದು, ಅದರ ಸಿದ್ಧತೆಗಾಗಿ ವಿದ್ಯಾರ್ಥಿಗಳು ಇಂದು ‘ತಾಲಿಮು’ ಏರ್ಪಡಿಸಿದ್ದರು ಎಂದು ಬೀದರ್‌ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ನಾಟಕ ತಾಲಿಮು ನಡೆಸುತ್ತಿದ್ದಾಗ ಇಬ್ಬರು ವಿದ್ಯಾರ್ಥಿಗಳು ನಾಟಕದ ಭಾಗವಾಗಿದ್ದ ‘ಜೈ ಶ್ರೀರಾಮ್’ ಘೋಷಣೆ ಕೂಗಿದರು. ಇದಕ್ಕೆ ಇನ್ನೊಂದು ಸಮುದಾಯದ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಆ ಸಮುದಾಯದ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ಸಮುದಾಯದ ವಿದ್ಯಾರ್ಥಿಗಳ ನಡುವೆ ಕ್ಯಾಂಪಸ್‌ನಲ್ಲಿ ದೊಡ್ಡ ಜಗಳವೇ ನಡೆದಿದೆ.

ಜಿಎನ್‌ಡಿ ಕಾಲೇಜು
ರಾಯಚೂರು: ಜೈ ಶ್ರೀರಾಮ್ ಎನ್ನುವವರನ್ನು ಪೊಲೀಸರು ಬೂಟಿನಿಂದ ಒದೆಯಬೇಕು; ಕಾಂಗ್ರೆಸ್ ಮುಖಂಡ ಬಷರುದ್ದಿನ್

ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಜಗಳವಾಡುತ್ತಿದ್ದ ಗುಂಪನ್ನು ಶಮನಗೊಳಿಸಿದರು. ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ನಿಷೇಧಾಜ್ಞೆ ಹೇರುವ ಅಗತ್ಯವಿಲ್ಲ. ಕಾಲೇಜು ಮತ್ತು ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ ತಿಳಿಸಿದ್ದಾರೆ.

ಮೇ 31 ರಂದು ನಡೆಯಲಿರುವ ಯೂತ್ ಫೆಸ್ಟ್ ಅನ್ನು ಕಾಲೇಜು ಆಡಳಿತ ಮಂಡಳಿ ರದ್ದುಗೊಳಿಸಿದೆ ಎಂದು ಅವರು ಹೇಳಿದ್ದಾರೆ.

ಜೈ ಶ್ರೀ ರಾಮ್ ಘೋಷಣೆ ಕೂಗಿದ ವಿದ್ಯಾರ್ಥಿಗಳು ನೋವಿನ ಬಗ್ಗೆ ದೂರು ನೀಡಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಮತ್ತು ಎಂಎಲ್‌ಸಿ (ಮೆಡಿಕೊ ಲೀಗಲ್ ಕೇಸ್) ದಾಖಲಿಸಿದ ನಂತರ ಅವರನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com