
ಉಡುಪಿ: ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ ಎಂದು ಮಾಜಿ ಶಾಸಕ ರಘುಪತಿ ಭಟ್ ಗೆ ವಿದ್ಯಾರ್ಥಿನಿ ಅಲಿಯಾ ಅಸಾದಿ ಟಾಂಗ್ ನೀಡಿದ್ದಾರೆ.
ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡುವಂತೆ ಒತ್ತಾಯಿಸಿ ಉಡುಪಿಯಲ್ಲಿ ನಡೆದ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ನನ್ನನ್ನು ಉಚ್ಛಾಟಿಸಲಾಯಿತು. ಆದರೆ ಈಗ ದೇವನು ತಾನಿಚ್ಚಿಸಿದ್ದನ್ನು ಮಾಡಿಯೇ ತೀರುವನು, ವಾರ್ಷಿಕ ಪರೀಕ್ಷೆಗೆ 60 ದಿನಗಳು ಬಾಕಿ ಇರುವಾಗ ಹಿಜಾಬ್ ಧರಿಸಿದ ಏಕಮಾತ್ರ ಕಾರಣಕ್ಕೆ ನನ್ನನ್ನು ಕಾಲೇಜಿನಿಂದ ಹೊರದಬ್ಬಿ ನಿಮ್ಮ ಪಕ್ಷಕ್ಕೆ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ತೋರಿಸಿದ್ದರಲ್ಲವೇ. ಆದರೆ, ಇಂದು ಅದೇ ಪಕ್ಷ ನಿಮ್ಮನ್ನು ಹೊರದಬ್ಬುವ ಆ ಕ್ಷಣವನ್ನು ನಾನು ನನ್ನ ಉಡುಪಿಯಲ್ಲೇ ನೋಡುವಂತಾಯಿತು’ ಎಂದಿದ್ದಾರೆ.
‘ಅಂದು ನಾನು ಉಚ್ಛಾಟಿತ ವಿದ್ಯಾರ್ಥಿ, ನಿಮಗೆ ಪಕ್ಷದಲ್ಲಿ ಪದವಿ. ಇಂದು ನಾನು ವಕೀಲೆ ಪದವಿ ವಿದ್ಯಾರ್ಥಿ, ನೀವು ಉಚ್ಛಾಟಿತ ವ್ಯಕ್ತಿ’ ಎಂದು ಅಲಿಯ ಅಸಾದಿ ರಾಜಕೀಯ ಪರಿಸ್ಥಿತಿ ಕುರಿತು ವ್ಯಂಗ್ಯವಾಡಿದ್ದಾರೆ.
Advertisement