69ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ. ಕರ್ನಾಟಕದ ಜನರು ಸದಾ ಸಂತೋಷ ಮತ್ತು ಯಶಸ್ಸಿನಿಂದ ಕೂಡಿರಲಿ ಎಂದು ಹೇಳಿದ್ದಾರೆ.

ರಾಜ್ಯದಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸುವರ್ಣ ಕರ್ನಾಟಕ ವರ್ಷಚಾರಣೆಯನ್ನು ಜನೋತ್ಸವವಾಗಿ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
69ನೇ ಕರ್ನಾಟಕ ರಾಜ್ಯೋತ್ಸವ: ಎಲ್ಲೆಡೆ ಹರಡಿದ ಕನ್ನಡದ ಕಂಪು; ಪಟಾಕಿ ಸಿಡಿಸಿ ಸಂಭ್ರಮ

ರಾಜ್ಯೋತ್ಸವ ಪ್ರಶಸ್ತಿ ಜೊತೆಗೆ, ಕರ್ನಾಟಕ ಸಂಭ್ರಮದ ಪ್ರಯುಕ್ತ 50 ಮಹಿಳಾ ಸಾಧಕರು, 50 ಪುರುಷ ಸಾಧಕರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ಕೂಡ ಈ ಬಾರಿ ಘೋಷಣೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂ. ನಗದನ್ನು ಒಳಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com