ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ಆಯತಪ್ಪಿ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.
ಗಾಯಗೊಂಡ ನಿಖಿಲ್ ಅವರನ್ನು ಕಾರ್ಯಕರ್ತರು ಉಪಚರಿಸುತ್ತಿರುವುದು.
ಗಾಯಗೊಂಡ ನಿಖಿಲ್ ಅವರನ್ನು ಕಾರ್ಯಕರ್ತರು ಉಪಚರಿಸುತ್ತಿರುವುದು.
Updated on

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಪಕ್ಷದ ನಾಯಕ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಬೈಕ್‌ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಗಾಯಗೊಂಡ ನಿಖಿಲ್ ಅವರನ್ನು ಕಾರ್ಯಕರ್ತರು ಉಪಚರಿಸುತ್ತಿರುವುದು.
ಚನ್ನಪಟ್ಟಣ ಉಪ ಚುನಾವಣೆ: ಅಖಾಡಕ್ಕೆ ದೇವೇಗೌಡ ಎಂಟ್ರಿ; ನಿಖಿಲ್ ಪರ ಬಿರುಸಿನ ಪ್ರಚಾರಕ್ಕೆ ವೇದಿಕೆ ಸಜ್ಜು!

ಸ್ಥಳೀಯ ಕಾರ್ಯಕರ್ತರು ಕೂಡಲೇ ನಿಖಿಲ್‌ ಅವರ ಸಹಾಯಕ್ಕೆ ಬಂದು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಘಟನೆಯಲ್ಲಿ ನಿಖಿಲ್ ಅವರ ಬಲಗಾಲಿಗೆ ಪೆಟ್ಟಾಗಿದ್ದರೂ, ನಿಖಿಲ್ ಅವರು ಕೆಲಕಾಲ ವಿಶ್ರಾಂತಿ ಪಡೆದು ನಂತರ ಮತ್ತೆ ಪ್ರಚಾರ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com