ದೀಪಾವಳಿ ರಜೆ ಮುಕ್ತಾಯ: ಬೆಂಗಳೂರಿಗೆ ವಾಪಸ್ ಆದ ಜನ; ಎಲ್ಲೆಡೆ ಟ್ರಾಫಿಕ್ ಜಾಮ್, ಮೆಟ್ರೋದಲ್ಲೂ ಜನವೋ ಜನ!

ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ದೈನಂದಿನ ಕೆಲಸಕ್ಕಾಗಿ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ.
Huge Traffic Jam In Bengaluru
ಬೆಂಗಳೂರು ಟ್ರಾಫಿಕ್ ಜಾಮ್
Updated on

ಬೆಂಗಳೂರು: ದೀಪಾವಳಿ ರಜೆ ನಿಮಿತ್ತ ಊರುಗಳಿಗೆ ತೆರಳಿದ್ದ ಬೆಂಗಳೂರು ಮಂದಿ ಇಂದು ನಗರಕ್ಕೆ ವಾಪಸ್ ಆಗಿದ್ದು, ಈ ವೇಳೆ ನಗರದ ಗಡಿಯಲ್ಲಿ ಭಾರಿ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಹೌದು.. ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ದೈನಂದಿನ ಕೆಲಸಕ್ಕಾಗಿ ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಾರೆ. ಈ ಹಿನ್ನೆಲೆ ನಗರದ ವಿವಿಧೆಡೆ ಟ್ರಾಫಿಕ್‌ ಜಾಮ್‌ (Traffic Jam) ಸಮಸ್ಯೆ ಉಂಟಾಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಬೆಂಗಳೂರು-ತುಮಕೂರು ರಸ್ತೆ (Bengaluru Tumkur Road), ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೂ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಭಾನುವಾರ ತಡರಾತ್ರಿಯಿಂದಲೇ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳು ಪರದಾಡುವಂತಾಗಿದೆ. ತುಮಕೂರು-ಸಿರಾ, ನೆಲಮಂಗಲ, ಪೀಣ್ಯ, ಕುಣಿಗಲ್ ಬೈಪಾಸ್ ಹತ್ತಿರ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು.

Huge Traffic Jam In Bengaluru
ದೀಪಾವಳಿ: ಪಟಾಕಿ ಅವಘಡ, ರಾಷ್ಟ್ರ ರಾಜಧಾನಿಯಲ್ಲಿ 280 ಸುಟ್ಟ ಗಾಯದ ಪ್ರಕರಣ ವರದಿ!

ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಜನ ದಾಂಗುಡಿ ಇಡುತ್ತಿದ್ದಾರೆ. ಹೀಗಾಗಿ ತುಮಕೂರು ರಸ್ತೆಯಲ್ಲಿ ಜನರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಹಾಸನ ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ನೆಲಮಂಗಲದ ಕುಣಿಗಲ್ ಬೈಪಾಸ್ ಹತ್ತಿರ ರವಿವಾರ (ನ.03)ರ ಸಂಜೆಯಿಂದ ಸೋಮವಾರ (ನ.04)ರ ನಸುಕಿನ ಜಾವದವರೆಗೆ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಮಳೆ ಸಹ ಬರುತ್ತಿತ್ತು. ಇದರಿಂದ ವಾಹನ ಸವಾರರು ಪರದಾಡಿದರು.

ಆದರೆ, ನೆಲಮಂಗಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಜಾಗೃತರಾಗಿ ಸಂಚಾರ ವ್ಯವಸ್ಥೆ ಸುಗಮ ಗೊಳಿಸಿದರು. ನಗರದ ಗೊರಗುಂಟೆಪಾಳ್ಯದ ಬಳಿಯೂ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೆ ಫುಲ್‌ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಇದರಿಂದ ಬೆಂಗಳೂರು ನಗರ ಪ್ರವೇಶಿಸುವಷ್ಟರಲ್ಲಿ ಜನ ಹೈರಾಣಾಗುತ್ತಿದ್ದಾರೆ.

ಮೆಟ್ರೋದಲ್ಲೂ ಜನವೋ ಜನ

ರಸ್ತೆಗಳಲ್ಲಿ ಮಾತ್ರವಲ್ಲ.. ಟ್ರಾಫಿಕ್‌ಗೆ ಬೇಸತ್ತು ನಾಗಸಂಧ್ರ ಮೆಟ್ರೋ ನಿಲ್ದಾಣದ ಬಳಿ ಇಳಿದು ಜನ ಮೆಟ್ರೋ ಸಂಚಾರದ ಮೊರೆ ಹೋಗುತ್ತಿದ್ದಾರೆ. ಈ ಹಿನ್ನಲೆ ನಾಗಸಂಧ್ರ ಮೆಟ್ರೋ ನಿಲ್ದಾಣ ಫುಲ್ ರಶ್ ಆಗಿದೆ. ಸರ್ಕಾರಿ ಬಸ್​ಗಳಿಗೂ ಕೂಡ ಟ್ರಾಫಿಕ್​ ಜಾಮ್​ ಬಿಸಿ ತಟ್ಟಿದೆ. ಗಂಟೆಗಟ್ಟಲೆ ಬಸ್​ಗಳು ಟ್ರಾಫಿಕ್​ನಲ್ಲಿ ನಿಂತಿದ್ದವು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.

ಕೆಲ ಪ್ರಯಾಣಿಕರು ನಾಗಸಂದ್ರದಲ್ಲೇ ಬಸ್​ನಿಂದ ಇಳಿದು ಮೆಟ್ರೋ ಮೂಲಕ ಬೆಂಗಳೂರು ನಗರದೊಳಗೆ ಆಗಮಿಸಿದರು. ಏಕಾಏಕಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮೆಟ್ರೋದತ್ತ ಮುಖ ಮಾಡಿದ್ದರಿಂದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ದಟ್ಟಣೆ ಉಂಟಾಗಿತ್ತು. ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಂತು ನಿಲ್ದಾಣದ ಒಳಗೆ ಪ್ರವೇಶಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com