ವ್ಯಕ್ತಿಗೆ ವಧು ಹುಡುಕುವಲ್ಲಿ ವಿಫಲ: ಬೆಂಗಳೂರಿನ ಮ್ಯಾಟ್ರಿಮೋನಿ ಸಂಸ್ಥೆಗೆ 60 ಸಾವಿರ ರೂ ದಂಡ!

ಇತ್ತೀಚಿನ ದಿನಗಳಲ್ಲಿ ಮದುವೆಯಾಗಲು (Marriage) ಕನ್ಯೆ ಸಿಗುತ್ತಿಲ್ಲ ಎಂದು ಅನೇಕ ಯುವಕರು ನೋವು ತೋಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಯುವಕರು ಮತ್ತು ಅವರ ಪೋಷಕರು ಮ್ಯಾಟ್ರಿಮೋನಿ ಸಂಸ್ಥೆಗಳು ಮತ್ತು ಮದುವೆ ಬ್ರೋಕರ್ ಗಳಿಗೆ ದುಬಾರಿ ಹಣ ನೀಡಿ ಕನ್ಯೆ ಹುಡುಕಾಟ ನಡೆಸುತ್ತಿದ್ದಾರೆ.
Matrimony Portal
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ತನ್ನ ಗ್ರಾಹಕರಿಗೆ ವಧು ಹುಡುಕಲು ವಿಫಲವಾದ ಕಾರಣ ಗ್ರಾಹಕ ನ್ಯಾಯಾಲಯವು ಬೆಂಗಳೂರಿನ ಮ್ಯಾಟ್ರಿಮೋನಿ ಸಂಸ್ಥೆಗೆ 60 ಸಾವಿರ ರೂ ದಂಡ ಹೇರಿದೆ.

ಇತ್ತೀಚಿನ ದಿನಗಳಲ್ಲಿ ಮದುವೆಯಾಗಲು (Marriage) ಕನ್ಯೆ ಸಿಗುತ್ತಿಲ್ಲ ಎಂದು ಅನೇಕ ಯುವಕರು ನೋವು ತೋಡಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಯುವಕರು ಮತ್ತು ಅವರ ಪೋಷಕರು ಮ್ಯಾಟ್ರಿಮೋನಿ ಸಂಸ್ಥೆಗಳು ಮತ್ತು ಮದುವೆ ಬ್ರೋಕರ್ ಗಳಿಗೆ ದುಬಾರಿ ಹಣ ನೀಡಿ ಕನ್ಯೆ ಹುಡುಕಾಟ ನಡೆಸುತ್ತಿದ್ದಾರೆ.

ಆದರೆ, ಅವುಗಳಿಂದಲೂ ಕನ್ಯೆ ಸಿಗುತ್ತಿಲ್ಲ. ಇದೀಗ ಇದೇ ಕಾರಣಕ್ಕೆ ಗ್ರಾಹಕ ನ್ಯಾಯಾಲಯ ಮ್ಯಾಟ್ರಿಮೋನಿ ಸಂಸ್ಥೆಗೆ ಬರೊಬ್ಬರಿ 60 ಸಾವಿರ ರೂ ದಂಡ ಹೇರಿದೆ.

ವ್ಯಕ್ತಿಯೊಬ್ಬರಿಗೆ ವಧು (Bride) ಹುಡುಕಿಕೊಡಲಿಲ್ಲ ಎಂಬ ಕಾರಣಕ್ಕೇ ಬೆಂಗಳೂರಿನ ಮ್ಯಾಟ್ರಿಮೋನಿ ಪೋರ್ಟಲ್ ದಿಲ್ ಮಿಲ್ ಮ್ಯಾಟ್ರಿಮೋನಿ ಸಂಸ್ಥೆಗೆ ಗ್ರಾಹಕ ರಕ್ಷಣಾ ನ್ಯಾಯಾಲಯವು 60 ಸಾವಿರ ರೂ ದಂಡ ವಿಧಿಸಿದೆ.

Matrimony Portal
'ಪುರುಷರಿಗಿಂತ ನಾವೇನು ಕಮ್ಮಿ, ನಾವೇಕೆ ಮಂತ್ರ ಪಠಿಸಬಾರದು?': 2 ವರ್ಷದಲ್ಲಿ 25 ಜೋಡಿಗೆ ಮದುವೆ ಮಾಡಿಸಿದ ದೆಹಲಿಯ ಅರ್ಚಕಿ

ಏನಿದು ಪ್ರಕರಣ?

ಬೆಂಗಳೂರಿನ ಎಂಎಸ್​ ನಗರ ನಿವಾಸಿ ಕೆಎಸ್​ ವಿಜಯಕುಮಾರ್​ ಅವರು ತಮ್ಮ ಮಗ ಬಾಲಾಜಿಗೆ ಕನ್ಯೆ ಹುಡುಕುತ್ತಿದ್ದರು. ಅದರಂತೆ, ವಿಜಯಕುಮಾರ್ ಅವರು ನಗರದ ಕಲ್ಯಾಣ ನಗರದಲ್ಲಿರುವ ದಿಲ್ ಮಿಲ್ ಮ್ಯಾಟ್ರಿಮೋನಿಗೆ ಭೇಟಿ ನೀಡಿದ್ದರು. ಈ ವೇಳೆ ಸಂಸ್ಥೆ ಬಾಲಾಜಿಗೆ 45 ದಿನಗಳಲ್ಲಿ ವಧು ಹುಡುಕುವುದಾಗಿ ಭರವಸೆ ನೀಡಿತ್ತು. ಬಳಿಕ, ಕೆಎಸ್​​ ವಿಜಯಕುಮಾರ್ ಅವರು ಮಾರ್ಚ್ 17 ರಂದು ಸಂಸ್ಥಗೆ ತಮ್ಮ ಮಗನ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ನೀಡಿದ್ದರು. ಜೊತೆಗೆ 30 ಸಾವಿರ ರೂ. ಶುಲ್ಕ ಕೂಡ ಪಾವತಿಸಿದ್ದರು. 45 ದಿನಗಳು ಕಳೆದರೂ ಸಂಸ್ಥೆ ವಧು ಹುಡುಕಿಕೊಡುವಲ್ಲಿ ವಿಫಲವಾಯಿತು. ಆಗ, ವಿಜಯಕುಮಾರ್​ ಅವರು ಹಣ ಮರಳಿಸುವಂತೆ ಹೇಳಿದರು. ಆದರೆ, ಸಂಸ್ಥೆಯ ಸಿಬ್ಬಂದಿ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ.

ಹೀಗಾಗಿ, ವಿಜಯಕುಮಾರ್ ಅವರು ಮಾರ್ಚ್ 30 ರಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದರು. ಆಗ, ಸಂಸ್ಥೆ ಏಪ್ರಿಲ್ 30ರವರೆಗೆ ಕಾಯುವಂತೆ ಮನವಿ ಮಾಡಿಕೊಂಡಿತು. ಒಂದು ತಿಂಗಳು ಕಾದರೂ ದಿಲ್ ಮಿಲ್​ ಮ್ಯಾಟ್ರಿಮೋನಿ ಸಂಸ್ಥೆಯಿಂದ ಪ್ರತಿಕ್ರಿಯೆ ಬರಲಿಲ್ಲ. ಹೀಗಾಗಿ, ವಿಜಯಕುಮಾರ್​ ಅವರು ಮತ್ತೊಮ್ಮೆ ಕಚೇರಿಗೆ ಭೇಟಿ ನೀಡಿದಾಗ ಅಲ್ಲಿನ ಸಿಬ್ಬಂದಿ ವಿಜಯ್ ಕುಮಾರ್ ಅವರನ್ನು ನಿಂದಿಸಿ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ನಂತರ, ವಿಜಯಕುಮಾರ್ ಅವರು ಮೇ5 ರಂದು ಸಂಸ್ಥೆಗೆ ಲೀಗಲ್ ನೋಟಿಸ್ ನೀಡಿದರು. ಇದಕ್ಕೆ ಸಂಸ್ಥೆ ಯಾವುದೇ ಉತ್ತರ ನೀಡಲಿಲ್ಲ. ಹೀಗಾಗಿ, ವಿಜಯಕುಮಾರ್ ಅವರು ಗ್ರಾಹಕ ನ್ಯಾಯಾಲಯದ ಮೊರೆ ಹೋದರು. ವಿಜಯಕುಮಾರ್ ಅವರ ಆರೋಪಕ್ಕೆ ದಿಲ್ ಮಿಲ್‌ ಸಂಸ್ಥೆ ಯಾವುದೇ ಉತ್ತರ ನೀಡಲಿಲ್ಲ.

Matrimony Portal
ಮತ್ತೊಂದು ಭಾರತ-ಪಾಕಿಸ್ತಾನ ಮದುವೆ; ಆನ್ಲೈನ್ ನಲ್ಲೇ Pak ಯುವತಿಯ ಮದುವೆಯಾದ ಬಿಜೆಪಿ ನಾಯಕನ ಪುತ್ರ! Video Viral

ಇದೀಗ ಬೆಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷ ಎಂಎಸ್ ರಾಮಚಂದ್ರ ಅವರು ವಿಚಾರಣೆ ವೇಳೆ, ದೂರುದಾರರಿಗೆ ಸೇವೆ ಸಲ್ಲಿಸುವ ವೇಳೆ ಸ್ಪಷ್ಟವಾದ ಕೊರತೆ ಕಂಡು ಬಂದಿದೆ. ಇದು ಅನ್ಯಾಯದ ವ್ಯಾಪಾರದ ಅಭ್ಯಾಸಗಳಲ್ಲಿ ತೊಡಗಿದೆ ಎಂದು ಹೇಳಬಹುದು. ಹೀಗಾಗಿ ದೂರುದಾರರು ಸಂಸ್ಥೆಗೆ ನೀಡಲಾದ ಶುಲ್ಕದೊಂದಿಗೆ ಪರಿಹಾರ ಮೊತ್ತವನ್ನೂ ನೀಡಬೇಕೆಂದು ಆದೇಶಿಸಿದ್ದಾರೆ.

ಆದೇಶದ ಅನ್ವಯ ವಿಜಯ್ ಕುಮಾರ್ ಅವರಿಗೆ ಶುಲ್ಕವಾಗಿ ಸಂಗ್ರಹಿಸಿದ 30,000 ರೂ., ಸೇವಾ ಕೊರೆತಗೆ 20,000 ರೂ., ಮಾನಸಿಕ ಸಂಕಟ ಉಂಟುಮಾಡಿದ್ದಕ್ಕಾಗಿ 5,000 ರೂ. ವ್ಯಾಜ್ಯಕ್ಕೆ 5,000 ರೂಪಾಯಿಗಳು ಒಟ್ಟು 60 ಸಾವಿರ ರೂ ಹಣವನ್ನು ದಂಡವಾಗಿ ದೂರುದಾರ ವಿಜಯಕುಮಾರ್ ಅವರಿಗೆ ಮರುಪಾವತಿಸುವಂತೆ ಆಯೋಗ ಆದೇಶಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com