ಗದಗ: ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಎಂದು ಗುರುತಿಸಲಾಗಿದೆ.
 ಮಂಜುನಾಥ ಹಾಗೂ ಮಕ್ಕಳು
ಮಂಜುನಾಥ ಹಾಗೂ ಮಕ್ಕಳು
Updated on

ಗದಗ: ವ್ಯಕ್ತಿಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಂಗಳವಾರ ಗದಗ ಜಿಲ್ಲೆಯ ಕೊರ್ಲಹಳ್ಳಿ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮುಂಡರಗಿ ತಾಲೂಕಿನ ಮಕ್ತುಪೂರ ಗ್ರಾಮದ ನಿವಾಸಿ ಮಂಜುನಾಥ ಅರಕೇರಿ ಎಂದು ಗುರುತಿಸಲಾಗಿದೆ.

ಮಂಜುನಾಥ ಅವರು ಮೊದಲು ತನ್ನ ಮೂವರು ಮಕ್ಕಳನ್ನು ನದಿಗೆ ಎಸೆದು ಬಳಿಕ ತಾನೂ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷದ ವೇದಾಂತ, ನಾಲ್ಕು ವರ್ಷದ ಪವನ್ ಹಾಗೂ ಆರು ವರ್ಷದ ಧನ್ಯಾ ನದಿ ಪಾಲಾದ ದುರ್ವೈವಿ ಮಕ್ಕಳು.

 ಮಂಜುನಾಥ ಹಾಗೂ ಮಕ್ಕಳು
ಬೆಳಗಾವಿ: ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿ ಆತ್ಮಹತ್ಯೆ!

ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣವೆಂದು ತಿಳಿದುಬಂದಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡರಗಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com