ಚಿಕ್ಕಮಗಳೂರು: ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರಿನ ಟೆಕ್ಕಿ ಸಾವು

ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ
ಅಮಿತ್ ಕುಮಾರ್
ಅಮಿತ್ ಕುಮಾರ್
Updated on

ಬೆಂಗಳೂರು: ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ಕೆಮ್ಮಣ್ಣುಗುಂಡಿ ಬಳಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಛತ್ತೀಸಗಡ ಮೂಲದ ಅಮಿತ್ ಕುಮಾರ್ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿರುವ ತಮಿಳುನಾಡಿನ ಗೆಳೆಯ ಸಲಾಮ್ ಖಾನ್ ಜೊತೆಗೆ ಹೋಗಿದ್ದರು.

ರಜೆ ಇದ್ದ ಕಾರಣ ಇವರಿಬ್ಬರು ಪ್ರವಾಸ ಕೈಗೊಂಡಿದ್ದರು. 120 ಅಡಿ ಇಳಿಜಾರಿನಲ್ಲಿ ನೀರು ಹರಿಯುವ ಹೆಬ್ಬೆ ಜಲಪಾತ ಸೇರಿದಂತೆ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದರು. ಜಲಪಾತದಲ್ಲಿನ ಎಚ್ಚರಿಕೆ ಫಲಕವನ್ನು ನಿರ್ಲಕ್ಷಿಸಿ ಇಬ್ಬರೂ ಈಜಲು ಹೋದಾಗ ಈ ದುರಂತ ಸಂಭವಿಸಿದೆ. ಆಳವಾದ ನೀರಿನಲ್ಲಿ ಅಮಿತ್ ಸಿಕ್ಕಿಬಿದ್ದು ನೀರಿನಲ್ಲಿ ಮುಳುಗಿದ್ದಾರೆ, ಅರಣ್ಯ ಸಿಬ್ಬಂದಿ ಮತ್ತು ಸ್ಥಳೀಯರು ಸಲಾಂ ಖಾನ್ ನನ್ನು ರಕ್ಷಿಸುವಲ್ಲಿ ಯಶಸ್ವಿಯಾದರು. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಮಿತ್ ಕುಮಾರ್
ದೀಪಾವಳಿ ಆಚರಣೆಗೆ ಬಂದಿದ್ದಾಗ ದುರ್ಘಟನೆ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com