ಶಿವಮೊಗ್ಗ: ಜಾಹಿರಾತು ಫಲಕದ ಕಂಬಕ್ಕೆ ಬೈಕ್‌ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ತೀರ್ಥಹಳ್ಳಿ ರಸ್ತೆಯಲ್ಲಿ ಶುಕ್ರವಾರ ಜಾಹಿರಾತು ಫಲಕದ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೀರ್ಥಹಳ್ಳಿ ರಸ್ತೆಯ ಹರಕೆರೆ ಸಮೀಪದ ಕಾನೇಹಳ್ಳದ ಬಳಿ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ಮರ ಹಾಗೂ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳನ್ನು ಆರ್ ಎಂಎಲ್ ನಗರದ ನಿಸಾರ್(18) ಹಾಗೂ ಮಂಜುನಾಥ ಬಡಾವಣೆಯ ಯಶವಂತ್(20) ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ
ಭಜನೆ ಮುಗಿಸಿ ಹಿಂತಿರುಗುತ್ತಿದ್ದಾಗ ಭೀಕರ ಅಪಘಾತ: ಟ್ರಕ್‌ಗೆ ಹಿಂದಿನಿಂದ ವ್ಯಾನ್ ಡಿಕ್ಕಿ, 7 ಮಂದಿ ದುರ್ಮರಣ

ಕೆಟಿಎಂ ಬೈಕ್‌ ನಲ್ಲಿ ತೀರ್ಥಹಳ್ಳಿ ಮಾರ್ಗವಾಗಿ ಗಾಜನೂರು ಐಟಿಐ ಕಾಲೇಜಿಗೆ ಈ ಯುವಕರು ತೆರಳುತ್ತಿದ್ದರು. ಈ ವೇಳೆ ಅತಿಯಾದ ವೇಗದಿಂದ ಬೈಕ್ ನಿಯಂತ್ರಣ ತಪ್ಪಿ ಜಾಹಿರಾತು ಫಲಕ ಅಳವಡಿಸಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಈ ಸಂಬಂಧ ತುಂಗಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com