ರಾಮನಗರ: ಕಾರಿಗೆ ಲಾರಿ ಡಿಕ್ಕಿ, ಭೀಕರ ಅಪಘಾತದಲ್ಲಿ ಮೂವರು ಸಾವು

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹಗಳು ಕಾರಿನಲ್ಲಿಯೇ ಛಿದ್ರವಾಗಿವೆ. ಹೀಗಾಗಿ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.
ಕಾರಿಗೆ ಲಾರಿ ಡಿಕ್ಕಿ
ಕಾರಿಗೆ ಲಾರಿ ಡಿಕ್ಕಿ
Updated on

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಶನಿವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೃತದೇಹಗಳು ಕಾರ್ ನಲ್ಲಿಯೇ ಛಿದ್ರವಾಗಿವೆ. ಹೀಗಾಗಿ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಘಟನಾ ಸ್ಥಳಕ್ಕೆ ಕನಕಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಕಾರಿಗೆ ಲಾರಿ ಡಿಕ್ಕಿ
ಕಲಬುರಗಿಯಲ್ಲಿ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಮೂವರು ಸೇರಿ ನಾಲ್ವರು ಸಾವು

ಈ ಸಂಬಂಧ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com