KIADB ಭೂಮಿಯನ್ನು ಶೀಘ್ರ BMRCL ಗೆ ವರ್ಗಾಯಿಸಿ: ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಉತ್ತರ ಕ್ಷೇತ್ರದ ಹೆಬ್ಬಾಳದಲ್ಲಿ ಬಹು ಮಾದರಿಯ ಸಾರಿಗೆ ಕೇಂದ್ರವನ್ನು ನಿರ್ಮಿಸಲು ಯೋಜಿಸುತ್ತಿದೆ.
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆTNIE
Updated on

ಬೆಂಗಳೂರು: 45 ಎಕರೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್‌ಸಿಎಲ್‌) ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವೆ ಹಾಗೂ ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಆವರು ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಉತ್ತರ ಕ್ಷೇತ್ರದ ಹೆಬ್ಬಾಳದಲ್ಲಿ ಬಹು ಮಾದರಿಯ ಸಾರಿಗೆ ಕೇಂದ್ರವನ್ನು ನಿರ್ಮಿಸಲು ಯೋಜಿಸುತ್ತಿದೆ. ಅತ್ಯಂತ ಅಗತ್ಯವಿರುವ ಈ ಯೋಜನೆಯು ಜನ ದಟ್ಟಣೆಯನ್ನು ಕಡಿಮೆ ಮಾಡುವುದಲ್ಲದೇ, ಮೆಟ್ರೋ ಬಳಕೆದಾರರಿಗೆ ವೇಗದ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲಿದೆ.

ಶೋಭಾ ಕರಂದ್ಲಾಜೆ
ಸಿಎಂ ಸಿದ್ದರಾಮಯ್ಯ, ಕುಟುಂಬಕ್ಕೆ ಬೈರತಿ ಸುರೇಶ್ ಕಳಂಕ ತಂದಿದ್ದಾರೆ: ಶೋಭಾ ಕರಂದ್ಲಾಜೆ

ಬಹು-ಹಂತದ ಪಾರ್ಕಿಂಗ್, ಡಿಪೋ ಸೇರಿದಂತೆ ಅತ್ಯಾಧುನಿಕ ಹಬ್‌ ನಿರ್ಮಾಣಕ್ಕಾಗಿ 45 ಎಕರೆಯ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯಿಂದ (ಕೆಐಎಡಿಬಿ) ಮೆಟ್ರೊಗೆ ವರ್ಗಾಯಿಸಲು 2024ರ ಮಾರ್ಚ್ʼನಲ್ಲಿ ಬಿಎಂಆರ್‌ಸಿಎಲ್ ವಿನಂತಿಸಿಕೊಂಡಿತ್ತು. ನಮ್ಮ ಮೆಟ್ರೋದ ಕಾರ್ಯದಕ್ಷತೆ ಹೆಚ್ಚಿಸಲು ಈ ಭೂಮಿ ಅತ್ಯವಶ್ಯಕವಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳು ತೆಗೆದುಕೊಳ್ಳುವ ಸಮಯೋಚಿತ ನಿರ್ಧಾರವು ಕಾಮಗಾರಿಯ ಹೆಚ್ಚಿನ ವೆಚ್ಚವನ್ನು ನಿಯಂತ್ರಿಸುತ್ತದೆ ಹಾಗೂ ನಾಗರಿಕರ ಜೀವನದ ಗುಣಮಟ್ಟ ಹೆಚ್ಚಿಸುತ್ತದೆ. ಭಾರತ ಸರ್ಕಾರದ ಸಂಪೂರ್ಣ ಬೆಂಬಲದೊಂದಿಗೆ ಬೆಂಗಳೂರನ್ನು ಮತ್ತಷ್ಟು ಅಭಿವೃದ್ಧಿಪಡಿಸೋಣ. ಈ ನಿಟ್ಟಿನಲ್ಲಿ ಕೆಐಎಡಿಬಿಯ ಭೂಮಿಯನ್ನು ಶೀಘ್ರವೇ ‌ಬಿಎಂಆರ್‌ಸಿಎಲ್‌ಗೆ ವರ್ಗಾಯಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com